ನಿಲ್ಲದ ವರುಣನಾರ್ಭಟ : ಕಾವೇರಿ ನದಿ ಪಾತ್ರದ ಜನರಿಗೆ ಎಚ್ಚರಿಕೆ Heavy-rain saaksha tv
ಮಂಡ್ಯ : ಕಾವೇರಿಕೊಳ್ಳ ಭಾಗದಲ್ಲಿ ಕಳೆದ ಒಂದು ವಾರದಿಂದ ವರುಣನ ಅಬ್ಬರ ಜೋರಾಗಿದೆ.
ಈ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಬಿಡುವ ಸಾಧ್ಯತೆಗಳಿವೆ ಕಾರಣ ಕಾವೇರಿ ನದಿ ಪಾತ್ರದ ಜನರು ಮುನ್ನಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.
ಕೆಆರ್ ಎಸ್ ಭರ್ತಿಯಾದ ಹಿನ್ನೆಲೆಯಲ್ಲಿ ನವೆಂಬರ್ 02 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸಿದ್ದರು.
ಇದಾದ ಬಳಿಕವೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೆಆರ್ ಎಸ್ ಭರ್ತಿಯಾಗಿದೆ.
ಹೀಗಾಗಿ ಮುಂದಿನ ದಿನಗಳಲ್ಲಿ ಅಪಾರ ಪ್ರಮಾಣದ ಮಳೆ ಬಿದ್ದರೆ ಡ್ಯಾಂನಿಂದ ನದಿಗೆ ಅಧಿಕ ಪ್ರಮಾಣದಲ್ಲಿ ನೀರು ಹರಿಸುವ ಸಾಧ್ಯತೆ ಇದೆ.
ಇದರಿಂದಾಗಿ ಕಾವೇರಿ ನದಿ ಪಾತ್ರದ ಜನರು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕೆಂದು ಆದೇಶಿಸಲಾಗಿದೆ.
ಕಾವೇರಿನದಿಯಲ್ಲಿ ಸ್ನಾನ ಮಾಡಲು ಭಕ್ತರು ನದಿಗೆ ಇಳಿಯದಂತೆ ಸೂಚಿಸಲಾಗಿದೆ.