ರಾಜ್ಯದ ಉತ್ತರ ಒಳನಾಡಿನ ಬಹುತೇಕ ಕಡೆ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ , ಚಿತ್ರದುರ್ಗ, ದಾವಣಗೆರೆ , ವಿಜಯನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೂಡ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಕಳೆದ 24 ಗಂಟೆಗಳಲ್ಲಿ ಕಲಬುರಗಿಯಲ್ಲಿ 43.1 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ರಾತ್ರಿ ಕೂಡ ಬೆಚ್ಚನೆ ಹವಾಮಾನ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.