ಕೊರೊನಾ ಕಾಟದ ಮಧ್ಯೆ ರಾಜ್ಯದಲ್ಲಿ ಸಿಡಿಲಿಗೆ 7 ಮಂದಿ ಬಲಿ karnataka
ಬೆಂಗಳೂರು : ಕೊರೊನಾ ಕಾಟದ ಮಧ್ಯೆ ರಾಜ್ಯದ ಹಲವು ಭಾಗಗಳಲ್ಲಿ ಅಕಾಲಿಕ ಮಳೆ ಅಬ್ಬರಿಸುತ್ತಿದ್ದು, ಸಾಕಷ್ಟು ಮಂದಿ ಸಾವನ್ನಪ್ಪಿದ್ದು ಸಾಕಷ್ಟು ಹಾನಿಯಾಗಿದೆ.
ಇವತ್ತು ಯಾದಗಿರಿ, ವಿಜಯನಗರ, ದಾವಣಗೆರೆ, ಗದಗ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗಿದ್ದು, ಇಂದು ಒಂದೇ ದಿನ ಸಿಡಿಲು ಬಡಿದು ಏಳು ಮಂದಿ ಮೃತಪಟ್ಟಿದ್ದಾರೆ.
ಯಾದಗಿರಿಯಲ್ಲಿ ಜಮೀನಿಗೆ ಕೂಲಿ ಕೆಲಸಕ್ಕೆಂದು ತೆರಳಿದ ಸಿದ್ದಮ್ಮ (40). ವಿಜಯನಗರ ಜಿಲ್ಲೆಯಲ್ಲಿ ರಾಜಶೇಖರ (33), ಚಿನ್ನಾಪುರಿ (40), ವೀರಣ್ಣ (50), ಪತ್ರೆಪ್ಪ (43).
ದಾವಣಗೆರೆಯಲ್ಲಿ ರವಿಕುಮಾರ್(32), ರಮೇಶ್ (30) ಸಿಡಿಲು ಬಡಿದು ಇಬ್ಬರು ಮೃತರಾಗಿದ್ದಾರೆ.