ಉಡುಪಿಯಲ್ಲಿ ಹೆಚ್ಚಾದ ಮಳೆ ಆರ್ಭಟ – ಕರಾವಳಿಯಲ್ಲಿ ಕಡಲ್ಕೊರೆತ
ಉಡುಪಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಕರಾವಳಿ ಭಾಗದ ಮರವಂತೆ, ಕಾಪು, ಕೋಟಾದಲ್ಲಿ ಕಡಲ್ಕೊರೆತ ಉಂಟಾಗಿದೆ. ಧಾರಾಕಾರ ಮಳೆಯಿಂದಾಗಿ ಸಮುದ್ರದಲ್ಲಿ ಅಲೆಗಳ ರಭಸಕ್ಕೆ ಸಂಪರ್ಕ ರಸ್ತೆಗಳು, ಮೀನುಗಾರರ ಮನೆಗಳು ಅಪಾಯಕ್ಕೆ ಸಿಲುಕಿವೆ.
ಸಾವಿರಾರು ಎಕರೆ ಕೃಷಿ ಭೂಮಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಭತ್ತದ ನಾಟಿಯಲ್ಲಿ ತೊಡಗಿದ್ದ ಕೃಷಿಕರಿಗೆ ತೊಂದರೆಯಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮೂರು ದಿನಗಳ ಕಾಲ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.
ಕಳೆದ 10 ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಮರವಂತೆ ಕಡಲತೀರದಲ್ಲಿ ಸಮುದ್ರ ಕೊರೆತದಿಂದ ಅಪಾರ ಹಾನಿಯಾಗಿದೆ. ಇದರಿಂದ ಮೀನುಗಾರಿಕೆಗೆ ತೀವ್ರ ಹಿನ್ನಡೆಯಾಗಿದೆ.
Heavy rainfall in Udupi – sea erosion on the coast