ಚೆನ್ನೈ: ತಮಿಳುನಾಡು ರಾಜ್ಯದಲ್ಲಿ ಭರ್ಜರಿ ಮಳೆಯಾಗುವ ಮುನ್ಸೂಚನೆ ಇದ್ದು, ಹಲವು ಜಿಲ್ಲೆಗಳಲ್ಲಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಈಗ ಈಶಾನ್ಯ ಮಾನ್ಸೂನ್ ತೀವ್ರಗೊಂಡಿದೆ. ಭಾರೀ (Rain) ಮಳೆಯ ಹಿನ್ನೆಲೆಯಲ್ಲಿ ರಾಜ್ಯದ ಕೊಯಮತ್ತೂರು, ತಿರುಪ್ಪೂರ್, ಮಧುರೈ, ಥೇಣಿ, ದಿನಿಡಿಗಲ್ ಸೇರಿದಂತೆ 5 ಜಿಲ್ಲೆಗಳಲ್ಲಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಗುರುವಾರ ಕೇರಳ ಹಾಗೂ ತಮಿಳುನಾಡಿನಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಕೆಲವು ದಿನಗಳಿಂದ ಕೇರಳದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಕಣ್ಣೂರು ಜಿಲ್ಲೆಯಲ್ಲಿ ಬುಧವಾರ 7 ಸೆಂ.ಮೀ ಮಳೆ ದಾಖಲಾಗಿದೆ. ಅಲ್ಲದೇ, ತಮಿಳುನಾಡು ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಹೀಗಾಗಿ ಅಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.