ಗಂಗಾವತಿ : ಹೊಸಳ್ಳಿ ರಸ್ತೆಯಲ್ಲಿ ಬರುವ ಲಕ್ಷ್ಮಿ ವೆಂಕಟೇಶ್ವರ ಕಾಲೋನಿಯಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ಭಾಗಿಯಾಗಿದ್ದ ಇಬ್ಬರು ಮಹಿಳೆಯರು ಸೇರಿ ಐವರನ್ನ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬಸವರಾಜ ವಿಜಯಪುರ, ಮತ್ತು ಸುರೇಶ್ ಸಿಂಧನೂರು, ಬಸವರಾಜ ತೋಟದ ಮಸ್ಕಿ ಎಂದು ಗುರುತಿಸಲಾಗಿದೆ.
ನಗರದ ಹೊಸಳ್ಳಿ ರಸ್ತೆಯಲ್ಲಿ ಬರುವ ಲಕ್ಷ್ಮೀ ವೆಂಕಟೇಶ್ವರ ಕಾಲೋನಿಯ ಸಿದ್ದಲಿಂಗಯ್ಯ ಸಿದ್ದಪ್ಪ ಎನ್ನುವವರ ಮನೆಯನ್ನು ಬಸವರಾಜ ವಿಜಯಪುರ ಎಂಬ ವ್ಯಕ್ತಿ ಕಳೆದ ಫೆಬ್ರವರಿ 20 ರಂದು ಮನೆ ಬಾಡಿಗೆಗೆ ತಗೆದುಕೊಂಡು ವೈಶ್ಯವಾಟಿಕೆ ದಂಧೆ ನಡೆಸುತ್ತಿದ್ದಾನೆ ಎಂದು ಪೊಲೀಸರಿಗೆ ದೂರು ಬಂದಿದೆ.
ಬಳಿಕ ಖಚಿತ ಮಾಹಿತಿ ಮೇರೆಗೆ ಡಿಯೈಎಸ್ ಪಿ ರುದ್ರೇಶ ಉಜ್ಜನಿಕೊಪ್ಪ ರವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಸವರಾಜ ವಿಜಯಪುರ ಮೂಲತಃ ವಿಜಯಪುರ ಜಿಲ್ಲೆಯವನಾಗಿದ್ದು, ಈತ ಮಹಾರಾಷ್ಟ್ರ, ಪುಣೆ ಹಾಗೂ ವಿಜಯಪುರದ ಕಡೆಯಿಂದ ಮಹಿಳೆಯರನ್ನ ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಎಂದು ತಿಳಿದುಬಂದಿದೆ.
ಸದ್ಯ ಬಂಧಿತರದಲ್ಲಿ ಮಹಾರಾಷ್ಟ್ರ ಮೂಲದ ಮತ್ತು ವಿಜಯಪುರ ಜಿಲ್ಲೆಯ ಸಂತ್ರಸ್ತೆಯರನ್ನು ರಕ್ಷಣೆ ಮಾಡಿ ಸಾಂತ್ವನ ಕೇಂದ್ರಕ್ಕೆ ಒಪ್ಪಿಸಲಾಗಿದೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತ-ಇಸ್ರೇಲ್ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಅತ್ಯುತ್ತಮ ಸ್ನೇಹಿತರಲ್ಲಿ ಒಬ್ಬರು ಎಂದು ಹೇಳಿದ್ದಾರೆ....
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ನಾಯಕರಿಗೆ ಹಿರಿಯ ಮುಖಂಡ, ಮಾಜಿ ಸಚಿವ...
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...