ನಾಳೆಯಿಂದ ಪ್ರೌಢ ಶಾಲೆ ಆರಂಭ | ಪ್ರಚೋದನಕಾರಿ ಪೋಸ್ಟ್ ಹಾಕಿದವರ ವಿರುದ್ಧ ಕ್ರಮ Saaksha Tv
ಹುಬ್ಬಳ್ಳಿ: ನಾಳೆಯಿಂದ ನಿಗದಿಯಂತೆ ಪ್ರೌಢ ಶಾಲೆಯ ತರಗತಿಗಳು ಆರಂಭಗೊಳ್ಳಲಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾಳೆಯಿಂದ ಪ್ರೌಢ ಶಾಲೆಯ 9 ಮತ್ತು 10ನೇ ತರಗತಿಗಳು ಆರಂಭಗೊಳ್ಳಲಿವೆ. ಈ ಬಳಿಕ ಪರಿಸ್ಥಿತಿ ನೋಡಿಕೊಂಡು ಕಾಲೇಜು ಆರಂಭಿಸುವ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಿಎಂ ತಿಳಿಸಿದ್ದಾರೆ.
ಈಗಾಗಲೇ ಜಿಲ್ಲಾಧಿಕಾರಿಗಳು, ಆಡಳಿತ ಮಂಡಳಿಗಳು ಮತ್ತು ಪ್ರಮುಖ ಧಾರ್ಮಿಕ ಮುಖಂಡರೊಂದಿಗೆ ಶಾಂತಿ ಸಭೆಯನ್ನು ನಡೆಸಿದ್ದಾರೆ. ನಾಳೆ ಶಾಂತಿಯುತವಾಗಿ ತರಗತಿಗಳನ್ನು ಆರಂಭಿಸಲಾಗುತ್ತದೆ. ಶಾಲಾ-ಕಾಲೇಜು ಆರಂಭ ನಮ್ಮ ಮೊದಲ ಆದ್ಯತೆ ಎಂದರು.
ನಾಳೆಯಿಂದ ಪ್ರೌಢ ಶಾಲೆಗಳು ಆರಂಭಗೊಳ್ಳುತ್ತಿದ್ದು, ಪರಿಸ್ಥಿತಿ ನೋಡಿಕೊಂಡು ಕಾಲೇಜು ಆರಂಭದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಮೊದಲಿನಂತೆ ಸೌಹಾರ್ದಯುತವಾದ ವಾತಾವರಣದಲ್ಲಿ ಶಾಲೆಗಳು ನಡೆಯಬೇಕು. ಹಿಜಾಬ್-ಕೇಸರಿ ಶಾಲು ಸಂಘರ್ಷದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹಾಕುವ ಪೋಸ್ಟ್ ಬಗ್ಗೆ ಪೊಲೀಸರು ಗಮನಿಸುತ್ತಿದ್ದಾರೆ. ಪ್ರಚೋದನಕಾರಿ ಪೋಸ್ಟ್ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.