Hijab controvercy : ವಿಧ್ಯಾರ್ಥಿಗಳು ಮತೀಯ ಶಕ್ತಿಗಳ ಕೈಯಲ್ಲಿ ಸ್ವಾಸ್ತ್ಯ ಕೆಡಿಸುವ ಅಸ್ತ್ರಗಳಾಗಬಾರದು : ಆರಗ ಜ್ಞಾನೇಂದ್ರ
ಹಿಜಬ್ ಮತ್ತು ಕೇಸರಿ ಗಲಾಟೆ ವಿಚಾರವಾಗಿ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ.. ಜ್ಞಾನವನ್ನು ಉದ್ದೀಪಿಸುವ ಶೈಕ್ಷಣಿಕ ಕೇಂದ್ರಗಳಲ್ಲಿ ಅಶಾಂತಿ ವಾತಾವರಣಕ್ಕೆ ಕಾರಣರಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.
ಶಾಲಾ ಕಾಲೇಜುಗಳು ರಾಷ್ಟ್ರದ ಭಾವೈಕ್ಯತೆಯ ಕೇಂದ್ರ ಬಿಂದುಗಳು.. ಆದ್ರೆ ರಾಷ್ಟ್ರದ ಆಸ್ತಿಯಾಗಬೇಕಾದ ವಿಧ್ಯಾರ್ಥಿಗಳು ಮತೀಯ ಶಕ್ತಿಗಳ ಕೈಯಲ್ಲಿ ಸಾಮಾಜಿಕ ಸ್ವಾಸ್ತ್ಯ ಕೆಡಿಸುವ ಅಸ್ತ್ರಗಳಾಗದಂತೆ ಪೋಷಕರು ಎಚ್ಚರ ವಹಿಸಬೇಕು.
ಶೈಕ್ಷಣಿಕ ಕೇಂದ್ರ ಗಳು, ವಿದ್ಯೆ ಕಲಿಯುವ ಹಾಗೂ ಭೋದನೆಯ ದೇಗುಲ ಗಳಾಗಿಯೇ ಉಳಿಯಬೇಕು ಎಂದು ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.