Hijab Controvercy : ದಾವಣಗೆರೆಯಲ್ಲಿ 144 ಸೆಕ್ಷನ್ ಜಾರಿ
ದಾವಣಗೆರೆ : ರಾಜ್ಯಾದ್ಯಂತ ಹಿಜಾಬ್ ಹಾಗೂ ಕೇಸರಿ ಸಂಘರ್ಷ ಭುಗಿಲೆದ್ದಿದೆ.. ಇದೀಗ ದಾವಣಗೆರೆಯ ಹರಿಹರದ ಪ್ರಥಮ ದರ್ಜೆ ಕಾಲೇಜಿನ ಬಳಿ ಗಲಾಟೆ ನಡೆದಿದೆ. ಅಲ್ಲದೇ ಹಿಜಾಬ್ ಗಲಾಟೆ ವಿಕೋಪಕ್ಕೆ ತಿರುಗಿದ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಲಾಗಿದೆ.. ಎಸ್ಪಿ ರಿಷ್ಯಂತ ಅವರು 144 ಸೆಕ್ಷನ್ ಜಾರಿಗೊಳಿಸಿದ್ದಾರೆ..
ಇದಕ್ಕೂ ಮೊದಲು ಪೊಲೀಸರು ಹಾಗೂ ಸಾರ್ವಜನಿಕರ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ..
ಹರಿಹರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಬಂದಿದ್ದ ಗುಂಪು ಗಲಾಟೆ ಶುರು ಮಾಡಿದ ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು.
ಆದ್ರೆ ಗಲಾಟೆ ನಿಯಂತ್ರಣಕ್ಕೆ ಹೋದ ಪೊಲೀಸರ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ… ಸ್ಥಳಕ್ಕೆ ಶಾಸಕ ಎಸ್ ರಾಮಪ್ಪ ಭೇಟಿ ನೀಡಿ ಪರಿಸ್ಥಿತಿ ಪರಿಶೀಲನೆ ನಡೆಸಿದ್ದಾರೆ..