ದೇಶದಲ್ಲಿ ಶಾಂತಿ ಹಾಳು ಮಾಡಲು ಹಿಜಾಬ್ ವಿವಾದ ಸೃಷ್ಟಿಸಲಾಗಿದೆ: ಯತ್ನಾಳ್ Saaksha Tv
ವಿಜಯಪುರ: ಕೋರ್ಟ್ ತೀರ್ಪು ಬರೋವರೆಗೂ ಕಾಲೇಜುಗಳಿಗೆ ರಜೆ ನೀಡಿ ಎಂದು ಶಾಸಕ ಬಸನಗೌಡ ಯತ್ನಾಳ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೋರ್ಟ್ ತೀರ್ಪು ಬರೋವರೆಗೂ ಕಾಲೇಜುಗಳಿಗೆ ರಜೆ ಕೊಡಿ. ಒಂದು ವಾರಗಳ ಕಾಲ ರಜೆ ಘೋಷಣೆ ಮಾಡೋದು ಒಳ್ಳೆಯದು. ಉದ್ದೇಶಪೂರ್ವಕವಾಗಿ ಗಲಾಟೆ ನಡೆಸುತ್ತಾರೆ. ಹಿಜಾಬ್ ಬೆಂಬಲಿಸೋರ ಉದ್ದೇಶವೇ ಗಲಾಟೆಯಾಗಿದೆ. ಅಶಾಂತಿ ಮೂಡಿಸೋದು ಅವರ ಉದ್ದೇಶ ಎಂದು ಹೇಳಿದ್ದಾರೆ.
ವಾರ ತಿಂಗಳವರೆಗೆ ಕೋರ್ಟ್ ಜಡ್ಜ್ ಮೆಂಟ್ ಮುಂದುವರೆದರೆ ಸಂಘರ್ಷ ಉಂಟಾಗುತ್ತೆ. ನ್ಯಾಯಾಲಯ ಶೀಘ್ರದಲ್ಲೇ ನ್ಯಾಯ ತೀರ್ಪು ನೀಡಲಿ. ನ್ಯಾಯಾಲಯ ಸೂಕ್ತ ತೀರ್ಪು ನೀಡಲಿದೆ. ನ್ಯಾಯಾಲಯ ನೀಡಿದ ತೀರ್ಪನ್ನ ಎಲ್ಲರೂ ಪಾಲಿಸಲೇಬೇಕು. ತೀರ್ಪು ಪಾಲಿಸದಿದ್ದರೇ ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಇದೆಲ್ಲವು ಉದ್ದೇಶ ಪೂರ್ವಕವಾಗಿ ಮಾಡಲಾಗುತ್ತಿದೆ. ಇದು ಕಾಂಗ್ರೆಸ್ ನ ಷಡ್ಯಂತ್ರ, ದೇಶದಲ್ಲಿ ಶಾಂತಿ ಹಾಳು ಮಾಡಲು ಹಿಜಾಬ್ ವಿವಾದ ಸೃಷ್ಟಿಸಲಾಗಿದೆ. ಹಿಜಾಬ್ ವಿವಾದ ತುಕುಡೆ ತುಕುಡೆ ಗ್ಯಾಂಗ್ ಕಾಂಗ್ರೆಸ್ನ ವ್ಯವಸ್ಥಿತ ಹುನ್ನಾರ ಇದಾಗಿದೆ. ದೇಶದಲ್ಲಿ ಅಸ್ಥಿರತೆ ತರಲು ನಡೆದ ಪ್ರಕ್ರಿಯೆ ಇದು. ಎಂದು ಮಾತನಾಡಿದರು.
ಹಿಜಾಬ್ ಹಾಕಲೇಬೇಕು ಅನ್ನೋದರ ಹಿಂದೆ ಕಾಂಗ್ರೆಸ್ನ ಶಕ್ತಿ ಇದೆ. ದೇಶ ವಿರೋಧಿ ಸಂಘಟನೆಗಳ ಬೆಂಬಲ ಇದೆ. ಹೈದ್ರಾಬಾದ್ ತಂಡ ಬಂದು, ಉಡುಪಿಯಲ್ಲಿ ಸಭೆ ನಡೆಸಿ ಹಿಜಾಬ್ಗೆ ಬೆಂಬಲಿಸಿದೆ. ರೈತರ ಹೋರಾಟ, ಸಿಎಎ ಹೋರಾಟದಲ್ಲಿಯು ಇದೆ ರೀತಿ ನಡೆದಿತ್ತು ಎಂದರು