Mandya | ಮಂಡ್ಯದಲ್ಲೂ ಹಿಜಾಬ್ v/s ಕೇಸರಿ ಶಾಲು ಫೈಟ್
ಮಂಡ್ಯ : ಸಕ್ಕರೆ ನಾಡು ಮಂಡ್ಯದಲ್ಲೂ ಹಿಜಾಬ್ ವರ್ಸಸ್ ಕೇಸರಿ ಶಾಲು ಫೈಟ್ ಆರಂಭವಾಗಿದೆ.
ಕರಾವಳಿ ಭಾಗದ ಯಾವುದೋ ಮೂಲೆಯಲ್ಲಿ ಶುರುವಾದ ಈ ವಿವಾದ ಇದೀಗ ರಾಜ್ಯದಾದ್ಯಂತ ವ್ಯಾಪಿಸಲು ಶುರುವಾಗಿದೆ.
ಇಂದು ಮಂಡ್ಯದ ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳು ಕೇಸರಿ ಶಾಲು ತೊಟ್ಟು ತರಗತಿಗಳಿಗೆ ಬಂದಿದ್ದಾರೆ.
ಕಾಲೇಜಿನಲ್ಲಿ ಹಿಜಾಬ್ ಧರಿಸೋದನ್ನ ವಿರೋಧಿಸಿ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ವಿವಿಯಲ್ಲಿ ಮೆರವಣಿಗೆ ಮಾಡಿದ್ದಾರೆ.
ಕುಂದಾಪುರದಲ್ಲಿ ಕೇಸರಿ ಸದ್ದು
ಉಡುಪಿ : ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಕೇಸರಿ ಶಾಲು – ಹಿಜಾಬ್ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವೆಂಕಟರಮಣ ಕಾಲೇಜಿನಲ್ಲಿ ಕೇಸರಿ ಶಾಲು ಕೊಟ್ಟು ವಿದ್ಯಾರ್ಥಿಗಳು ಮೆರವಣಿಗೆ ಮಾಡಿದ್ದಾರೆ.
ಹೀಗಾಗಿ ಕಾಲೇಜಿನ ಮೈದಾನದಲ್ಲಿ ಪ್ರಾಂಶುಪಾಲರು ವಿದ್ಯಾರ್ಥಿಗಳ ಅಡ್ಡ ಹಾಕಿದ್ದಾರೆ. ಸ್ಥಳಕ್ಕೆ ಕುಂದಾಪುರ ಎಸ್ಐ ಸದಾಶಿವ ಗವರೋಜಿ ಭೇಟಿ ನೀಡಿದ್ದರು.