hijab controversy | ಉಡುಪಿಯಲ್ಲಿ ಮುಂದುವರೆದ ಕೇಸರಿ ಶಾಲು – ಹಿಜಾಬ್ ವಿವಾದ hijab controversy in udupi
ಉಡುಪಿ : ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಕೇಸರಿ ಶಾಲು – ಹಿಜಾಬ್ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವೆಂಕಟರಮಣ ಕಾಲೇಜಿನಲ್ಲಿ ಕೇಸರಿ ಶಾಲು ಕೊಟ್ಟು ವಿದ್ಯಾರ್ಥಿಗಳು ಮೆರವಣಿಗೆ ಮಾಡಿದ್ದಾರೆ.
ಹೀಗಾಗಿ ಕಾಲೇಜಿನ ಮೈದಾನದಲ್ಲಿ ಪ್ರಾಂಶುಪಾಲರು ವಿದ್ಯಾರ್ಥಿಗಳ ಅಡ್ಡ ಹಾಕಿದ್ದಾರೆ. ಸ್ಥಳಕ್ಕೆ ಕುಂದಾಪುರ ಎಸ್ಐ ಸದಾಶಿವ ಗವರೋಜಿ ಭೇಟಿ ನೀಡಿದ್ದರು.
ಕಾಲೇಜಿನ ಪ್ರಾಂಶುಪಾಲರು, ಕೇಸರಿ ಶಾಲು ಹಾಕಿ ಕಾಲೇಜಿಗೆ ಪ್ರವೇಶ ಇಲ್ಲ ಅಂತಾ ಸ್ಪಷ್ಟಪಡಿಸಿದ್ರೂ, ಪ್ರಾಂಶುಪಾಲರ ಜೊತೆ ವಿದ್ಯಾರ್ಥಿಗಳು ವಾಗ್ವಾದ ನಡೆಸಿದ್ದಾರೆ.
ಬುರ್ಖಾ ಹಿಜಾಬ್ ಧರಿಸಿ ಬಂದರೆ ನಾವು ಕೇಸರಿ ಶಾಲು ಧರಿಸಿ ಬರುತ್ತೇವೆ ಎಂದು ಪ್ರಾಂಶುಪಾಲರ ಮುಂದೆ ವಿದ್ಯಾರ್ಥಿಗಳ ಹೇಳಿದ್ದಾರೆ. ಇದಕ್ಕೆ ಪ್ರಾಂಶುಪಾಲರು, ಬುರ್ಖಾ ಸ್ಕಾರ್ಫ್ ಗೆ ಅವಕಾಶ ನೀಡುವುದಿಲ್ಲ ಎಂದು ಮನವರಿಕೆ ಮಾಡಿಕೊಟ್ಟ ಬಳಿಕ ವಿದ್ಯಾರ್ಥಿಗಳು ಶಾಲು ತೆಗೆದು ತರಗತಿಗಳಿಗೆ ಹೋಗಿದ್ದಾರೆ.