Hijab | ಹಿಜಾಬ್ ಅವಾಂತರಗಳಿಗೆ ಸಿದ್ದರಾಮಯ್ಯ ಅವರೇ ನೇರ ಹೊಣೆಗಾರರು hijab-Siddaramaiah is directly responsible for the hijab
ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಅವಾಂತರಗಳಿಗೆ ಸಿದ್ದರಾಮಯ್ಯ ಅವರೇ ನೇರ ಹೊಣೆಗಾರರು ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ.
ಹಿಜಾಬ್ ವಿವಾದವಾಗಿ ಕಾಂಗ್ರೆಸ್ ನಾಯಕ ವಿರುದ್ಧ ಸರಣಿ ಟ್ವೀಟ್ ಗಳನ್ನು ಮಾಡಿರುವ ಬಿಜೆಪಿ, ಕಾಂಗ್ರೆಸ್ ಪಕ್ಷದ ಕರಾವಳಿ ನಾಯಕರು ಹಿಜಾಬ್ ಗಿಂತ ನಮಗೆ ರಾಜಕೀಯ ಭವಿಷ್ಯ ಮುಖ್ಯ ಎನ್ನುತ್ತಾರೆ.
ಆದರೆ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ನಾಯಕರು, ರಾಹುಲ್ ಗಾಂಧಿ ಸೇರಿ ರಾಷ್ಟ್ರ ನಾಯಕರು ಹಿಜಾಬ್ ಪರ ವಕಾಲತ್ತು ವಹಿಸುತ್ತಾರೆ. ಕಾಂಗ್ರೆಸ್ಸಿಗರೇ, ಇಂತಹ ದಾರಿ ತಪ್ಪಿಸುವ ಪ್ರಯತ್ನವೇಕೆ ಎಂದು ಪ್ರಶ್ನಿಸಿದೆ.
ಆರಂಭದಲ್ಲಿ ಕೇವಲ 6 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಶಾಲೆಗೆ ಬಂದು, ಸಮವಸ್ತ್ರ ನಿಯಮ ಉಲ್ಲಂಘಿಸಿದರು.
1983 ರ ಶಿಕ್ಷಣ ಕಾಯ್ದೆಯ ಪ್ರಕಾರ ರಾಜ್ಯದಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ.
ಆದರೆ @siddaramaiah ಅವರು ಹಿಜಾಬ್ ಒಳಗಿರುವ ಮತ ಪಡೆಯಲು ಹಿಜಾಬ್ ಧರಿಸುವುದು ಮೂಲಭೂತ ಹಕ್ಕು ಎನ್ನುತ್ತಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಅವಾಂತರಗಳಿಗೆ ಸಿದ್ದರಾಮಯ್ಯ ಅವರೇ ನೇರ ಹೊಣೆಗಾರರು.#YesToUniform_NoToHijab
— BJP Karnataka (@BJP4Karnataka) February 8, 2022
ಇವರಿಗೆ ಪ್ರಚೋದನೆ ನೀಡಿದ ಪರಿಣಾಮ, ಈಗ ಇಡೀ ರಾಜ್ಯದ ಶಾಲಾ–ಕಾಲೇಜುಗಳಲ್ಲಿ ವಿವಾದ ಹಬ್ಬಿದೆ. ಸಿದ್ದರಾಮಯ್ಯ ಅವರ ಹಿಜಾಬ್ ಮೂಲಭೂತ ಹಕ್ಕು ಎಂಬ ಪ್ರಚೋದನೆಯೇ ಇದಕ್ಕೆ ನೇರ ಕಾರಣ.
1983 ರ ಶಿಕ್ಷಣ ಕಾಯ್ದೆಯ ಪ್ರಕಾರ ರಾಜ್ಯದಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ. ಆದರೆ ಸಿದ್ದರಾಮಯ್ಯ ಅವರು ಹಿಜಾಬ್ ಒಳಗಿರುವ ಮತ ಪಡೆಯಲು ಹಿಜಾಬ್ ಧರಿಸುವುದು ಮೂಲಭೂತ ಹಕ್ಕು ಎನ್ನುತ್ತಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಅವಾಂತರಗಳಿಗೆ ಸಿದ್ದರಾಮಯ್ಯ ಅವರೇ ನೇರ ಹೊಣೆಗಾರರು.
ಮೂಲಭೂತವಾದಿಗಳಿಗೆ ಸಂವಿಧಾನದ ಗುರಾಣಿ ಕೊಡುವ ಸಿದ್ದರಾಮಯ್ಯ ಅವರಿಗೆ ಸಂವಿಧಾನದ 25ನೇ ವಿಧಿಯ 2(ಎ), 2(ಬಿ) ಏನು ಹೇಳುತ್ತದೆ ಎಂಬುದು ತಿಳಿಯದಾದುದು ವಿಪರ್ಯಾಸ.
ಶಾಂತಿಭಂಗ, ಸಾರ್ವಭೌಮತೆಗೆ ಧಕ್ಕೆಯಾದಾಗ ಸರ್ಕಾರಕ್ಕೆ ಧಾರ್ಮಿಕ ಹಕ್ಕನ್ನು ನಿರ್ಬಂಧಿಸುವ ಅಧಿಕಾರವೂ ಇದೆ. ಈಗ ನಡೆಯುತ್ತಿರುವುದು ಶಾಂತಿಭಂಗದ ಯತ್ನ ಎಂದು ಹೇಳಿದೆ.