ಅಪಾರ ಮಹಿಮೆಯುಳ್ಳ ದೈವೀ ಶಕ್ತಿ ಪೀಠಗಳಲ್ಲಿ ಶ್ರೀ ಸಿಗಂದೂರು ಚೌಡೇಶ್ವರಿ ಅಮ್ಮನವರ ಕ್ಷೇತ್ರವೂ ಒಂದು ಸಿಗಂದೂರು ಚೌಡೇಶ್ವರಿ ದೇವಸ್ಥಾನವು ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಒಂದು ಪ್ರಸಿದ್ಧ ಯಾತ್ರಾ ಸ್ಥಳವಾಗಿದೆ. ಈ ದೇವಾಲಯವು ಚೌಡೇಶ್ವರಿ ದೇವಿಗೆ ಸಮರ್ಪಿತವಾಗಿದೆ, ಚೌಡೇಶ್ವರಿ ದೇವಿಯನ್ನು
ಸಿಗಂದೂರೇಶ್ವರಿ ಎಂದೂ ಕರೆಯುತ್ತಾರೆ.
ಇತಿಹಾಸ:
500 ವರ್ಷದ ಇತಿಹಾಸವಿದೆ ದೇವಿಗೆ!
ಒಂದಾನೊಂದು ಕಾಲದಲ್ಲಿ ಶೇಷಪ್ಪ ಎಂಬಾತ ಭೇಟೆಯಾಡಲು ಸಿಗಂದೂರು ಕಾಡಿಗೆ ಹೋಗಿದ್ದನಂತೆ. ದಾರಿ ತಪ್ಪಿ ಕಳೆದು ಹೋಗದಂತೆ, ರಾತ್ರಿ ಅಲ್ಲಿಯೇ ವಿಶ್ರಾಂತಿ ಪಡೆಯಲು ಮರದ ಕೆಳಗೆ ಮಲಗಿದ್ದನಂತೆ. ಆತನ ಕನಸಿನಲ್ಲಿ ದೇವಿ ಬಂದು, ತಾನಿಲ್ಲಿ ನೆಲೆಸಿರುವುದಾಗಿ ಹೇಳಿ ಗುಡಿ ಕಟ್ಟಿಸಲು ಆಜ್ಞೆ ಮಾಡುತ್ತಾಳೆ. ಮರು ದಿನವೇ ಆತ ಊರಿಗೆ ಹೋಗಿ ನಡೆದ ಘಟನೆಯನ್ನು ಬ್ರಾಹ್ಮಣ ದುಗ್ಗಜ್ಜ ಬಳಿ ಹೇಳಿಕೊಂಡು, ಗುಡಿ ಕಟ್ಟಿಸುತ್ತಾನೆ ಎಂದು ಇತಿಹಾಸವಿದೆ.1990 ರಲ್ಲಿ ಆಗಮ ಶಾಸ್ತ್ರೋಕ್ತವಾಗಿ ದೇವಿಯನ್ನು ಪ್ರತಿಷ್ಠಾಪಿಸಲಾಯಿತು.
ಮಹಿಮೆ:
* ಕಳ್ಳ ಕಾಕರೂ ಈ ದೇವಿ ಹೆಸರು ಹೇಳಿದರೆ ಬೆದರುತ್ತಾರೆ. ಅದಕ್ಕೆ, ‘ಸಿಗಂದೂರು ಚೌಡೇಶ್ವರಿಯ ಕಾವಲಿದೆ, ಎಚ್ಚರಿಕೆ..’ ಎಂಬ ಬೋರ್ಡ್ ಎಲ್ಲಡೆ ರಾರಾಜಿಸುವುದೂ ಸಾಮಾನ್ಯ.
* ಕಳೆದುಹೋದ ವಸ್ತುಗಳನ್ನು ಮರಳಿ ಪಡೆಯಲು ಇಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ.
* ಭಕ್ತರ ಕಷ್ಟಗಳನ್ನು ನಿವಾರಿಸುವಲ್ಲಿ ದೇವಿ ಸದಾ ಸಹಾಯ ಮಾಡುತ್ತಾರೆ ಎಂಬ ನಂಬಿಕೆ ಇದೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ
ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ಜ್ಯೋತಿಷ್ಯಶಾಸ್ತ್ರತಜ್ಞರು 8548998564
ವಿಶೇಷತೆಗಳು:
* ದೇವಾಲಯವು ವರ್ಷವಿಡೀ ಭಕ್ತರಿಂದ ತುಂಬಿರುತ್ತದೆ.
* ಮಕರ ಸಂಕ್ರಾಂತಿಯಂದು ಇಲ್ಲಿ ಜಾತ್ರೆ ನಡೆಯುತ್ತದೆ.
* ಇದು ಧಾರ್ಮಿಕ ಪ್ರವಾಸೋದ್ಯಮಕ್ಕೆ ಒಂದು ಪ್ರಮುಖ ಕೇಂದ್ರವಾಗಿದೆ.
ದೇವಸ್ಥಾನದ ಸಮಯ:
ಪೂಜೆ ಮಾಡುವುದು ಬೆಳಗ್ಗೆ ಮಾತ್ರ. ಸಂಜೆ ದರ್ಶನ ಮಾಡಬಹುದು.
ಬೆಳಗ್ಗೆ 4.30-7.00 ಹಾಗೂ 9.00-2.00
ದರ್ಶನ ಸಂಜೆ 4.00 – 7.00
ಸಿಗಂದೂರು ಚೌಡೇಶ್ವರಿ ದೇವಸ್ಥಾನವು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ, ಇದು ಭಕ್ತರ ನಂಬಿಕೆ ಮತ್ತು ಭರವಸೆಯ ಕೇಂದ್ರವಾಗಿದೆ. ಕಷ್ಟದಲ್ಲಿರುವವರು ಇಲ್ಲಿಗೆ ಬಂದು ದೇವಿಯ ಆಶೀರ್ವಾದ ಪಡೆದು ನೆಮ್ಮದಿಯ ಜೀವನ ನಡೆಸುತ್ತಾರೆ.








