ಇವರಿಗೆ ಚಪ್ಪಲಿಯಲ್ಲಿ ಹೊಡೆಯಬೇಕು : ಜಗ್ಗೇಶ್ ಆಕ್ರೋಶ
ಬೆಂಗಳೂರು : ಕರೊನಾ ದಿಂದ ಮೃತಪಟ್ಟ ವ್ಯಕ್ತಿ ಗಳ ಅಂತ್ಯ ಸಂಸ್ಕಾರಕ್ಕೆ ಸಾವಿರ ಸಾವಿರ ಹಣ ಪಡೆಯುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಆಗುತ್ತಾಲೇ ಇದೆ.. ಇದೀಗ ಈ ಬಗ್ಗೆ ನವರಸ ನಾಯಕ ಜಗ್ಗೇಶ್ ಸಾಮಾಜಿಕ ಜಾಲತಾಣಗಳ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ..
ಈ ಕುರಿತು ಟ್ವೀಟ್ ಮಾಡಿರುವ ಅವರು, ಇಬ್ಬರು ಬಂಧುಗಳು, ಮೂವರು ಸ್ನೇಹಿತರು ಕರೊನಾದಿಂದ ಶುಕ್ರವಾರ ತೀರಿಕೊಂಡರು, ಮೂವರು ನರಳುತ್ತಿದ್ದಾರೆ. ಎದ್ದು ಹೋಗಿ ಸಹಾಯ ಮಾಡಲು ಆಗದು ಅಂತಹ ದರಿದ್ರ ಈ ಖಾಯಿಲೆಯಾಗಿದೆ. ನನ್ನ ಬಂಧು ಹೆಣಸಂಸ್ಕಾರಕ್ಕೆ ಆಂಬ್ಯುಲೆನ್ಸ್ ಹಾಗೂ ಸ್ಮಶಾನದವರು ನಾಯಿಗಳಂತೆ 30 ಸಾವಿರ ರೂ. ಪೀಕಿದ್ದಾರೆ, ಇವರಿಗೆ ಹೋಗಿ ಚಪ್ಪಲಿಯಲ್ಲಿ ಹೊಡೆಯಬೇಕು ಅನ್ನಿಸಿತು. ಇಂಥವರಿಂದ ಸರ್ಕಾರಕ್ಕೆ ಕೆಟ್ಟಹೆಸರು.
ಇಂಥ ಸಮಯದಲ್ಲೆ ಇಂಥ ಕ್ರೂರಿಗಳು active ಆಗೋದು!
ಇಂಥ ಕೀಳು ಜನರಿಂದ ಮನುಷ್ಯರಿಗೆ ಮನುಷ್ಯರ ಮೇಲೆ ನಂಬಿಕೆ ಸತ್ತು ಹೋಗಿದೆ, ನಾನು ಇಷ್ಟು ನೊಂದದ್ದು ಇತ್ತೀಚಿನ ಈ ಕ್ರೂರ ವರ್ತನೆಯಿಂದ!ನನಗೆ ಅರಿಯದಂತೆ ಕೆಟ್ಟಬೈಗುಳ ಕೋಪ ಅನಾವಶ್ಯಕ ಬರುತ್ತಿದೆ!
ತಪ್ಪು ಎಂದು ನನ್ನ ನಾನೆ ಸರಿಪಡಿಸಿಕೊಳ್ಳುತ್ತಿರುವೆ!
ಇಂಥ ದಿನಗಳ ಎಣಿಸಲಿಲ್ಲಾ ನಾನು horrible https://t.co/HHZfj0MJeu— ನವರಸನಾಯಕ ಜಗ್ಗೇಶ್ (@Jaggesh2) April 24, 2021
ಇಂಥ ಸಮಯದಲ್ಲೆ ಇಂಥ ಕ್ರೂರಿಗಳು ಹೆಚ್ಚಾಗೋದು. ಕೀಳು ಜನರಿಂದ ಮನುಷ್ಯರಿಗೆ ಮನುಷ್ಯರ ಮೇಲೆ ನಂಬಿಕೆ ಸತ್ತು ಹೋಗಿದೆ, ನಾನು ಇಷ್ಟು ನೊಂದದ್ದು ಇತ್ತೀಚಿನ ಈ ಕ್ರೂರ ವರ್ತನೆಯಿಂದ ನನಗೆ ಅರಿಯದಂತೆ ಕೆಟ್ಟ ಬೈಗುಳ ಕೋಪ ಅನಾವಶ್ಯಕ ಬರುತ್ತಿದೆ, ತಪ್ಪು ಎಂದು ನನ್ನನ್ನು ನಾನೆ ಸರಿಪಡಿಸಿಕೊಳ್ಳುತ್ತಿರುವೆ. ಇಂಥ ದಿನಗಳ ಎಣಿಸಲಿಲ್ಲಾ ನಾನು ಎಂದು ಬರೆದುಕೊಂಡಿದ್ದಾರೆ.