ನಾಳೆ ಹಾಸನ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಹಾಸನ : ಇಂದು ರಾತ್ರಿ 10 ಗಂಟೆಯಿಂದ ಸೋಮವಾರ ಬೆ.5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಹಿನ್ನಲೆ ನಾಳೆ ಹಾಸನ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜಾ ಘೋಷಣೆ ಮಾಡಿ ಡಿಸಿ ಆರ್ ಗಿರೀಶ್ ಆದೇಶ ಹೊರಡಿಸಿದ್ದಾರೆ.
ವೀಕೆಂಡ್ ಕರ್ಫ್ಯೂ ವೇಳೆಯಲ್ಲಿ ತುರ್ತು, ಅತ್ಯಾವಶ್ಯಕ ಸೇವೆಗಳು ಇರಲಿವೆ. ಕೈಗಾರಿಕೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.
ಹೋಟೆಲ್ ಗಳಲ್ಲಿ ಪಾರ್ಸಲ್ ಗೆ ಮಾತ್ರ ಅವಕಾಶವಿರುತ್ತದೆ . ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರು ತರಕಾರಿಗಳನ್ನು ಮಾರಾಟ ಮಾಡಬಹುದು ಎಂದು ತಿಳಿಸಿದ್ದಾರೆ.
ಇನ್ನು ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ಮದ್ಯದಂಗಡಿಗಳು ಸಂಪೂರ್ಣ ಬಂದ್ ಆಗಿರಲಿವೆ.
ಪಾರ್ಕ್, ಜಿಲ್ಲಾ ಕ್ರೀಡಾಂಗಣ, ಒಳಾಂಗಣ ಕ್ರೀಡಾಂಗಣಗಳು ಮುಚ್ಚಲಿವೆ. ದೇವಾಲಯಗಳು ಸಂಪೂರ್ಣ ಬಂದ್ ಆಗಲಿವೆ ಎಂದು ಗಿರೀಶ್ ಅವರು ಮಾಹಿತಿ ನೀಡಿದ್ದಾರೆ.