ಬೆಂಗಳೂರು: ನಗರದ ಹೊರವಲಯದಲ್ಲಿ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಹೋಟೆಲ್ ನಲ್ಲಿ ಊಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ದಾಳಿ ನಡೆಸಿದ ದುಷ್ಕರ್ಮಿಗಳು ಮನಸ್ಸೋ ಇಚ್ಛೆ ದಾಳಿ ನಡೆಸಿದ್ದಾರೆ. ಮಂಜುನಾಥ್ ಎಂಬ ವ್ಯಕ್ತಿಯ ದಾಳಿ ನಡೆದಿದೆ. ದಾಳಿಯಲ್ಲಿ ಕೈ ಕತ್ತರಿಸಿ, ಕಾಲು ದೇಹದ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.
ಈ ಘಟನೆ ಬೆಂಗಳೂರಿನ ದೇವನಹಳ್ಳಿಯ ವಿಶ್ವನಾಥಪುರದಲ್ಲಿ ನಡೆದಿದೆ. ಶ್ರೀರಾಮ್ ಎಂಬುವನೇ ದಾಳಿ ಮಾಡಿ ಪರಾರಿಯಾಗಿದ್ದಾನೆ. ಹಲ್ಲೆಗೊಳಗಾದ ಮಂಜುನಾಥ್, ಶ್ರೀರಾಮ್ ನ ಅತ್ತೆ ಮಗ. ತಂದೆ ಕೊಲೆ ಪ್ರಕರಣದಲ್ಲಿ ಸಹಾಯಕ್ಕೆ ಬಂದಿಲ್ಲವೆಂದು ಶ್ರೀರಾಮ್, ಮಂಜುನಾಥ್ ಮೇಲೆ ದ್ವೇಷ ಬೆಳೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.
ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಂಜುನಾಥ್ ನ ಕೈ ಕತ್ತರಿಸಿ, ಕಾಲು ದೇಹದ ಮೇಲೆ ಲಾಂಗ್ ಬೀಸಿ ಪರಾರಿಯಾಗಿದ್ದಾರೆ
ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...







