ಆಸ್ಪತ್ರೆ ಮೆಲ್ಚಾವಣಿ ಕುಸಿತ – ಅವಶೇಷಗಳಡಿ ಸಿಲುಕಿದ ಇಬ್ಬರು ಕಾರ್ಮಿಕರು
ಖಾಸಗಿ ಆಸ್ಪತ್ರೆಯ ನಿರ್ಮಾಣ ಹಂತದ ಮೇಲ್ಚಾವಣಿ ಕುಸಿದು ಬಿದಿದ್ದು, ಇಬ್ಬರು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನೃಪತುಂಗ ರಸ್ತೆಯಲ್ಲಿರುವ ಸೆಂಟ್ ಮಾರ್ಥಾಸ್ ಆಸ್ಪತ್ರೆಯ ಮೇಲ್ಛಾವಣಿ ನಿರ್ಮಾಣ ಕಾರ್ಯಕ್ಕಾಗಿ ನಾಲ್ವರು ಕಾರ್ಮಿಕರು ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಕೆಲಸಕ್ಕಾಗಿ ಆಗಮಿಸಿದ್ದರು. ಈ ಸಂದರ್ಭ ಏಕಾಏಕಿ ಛಾವಣಿ ಕುಸಿದು ಬಿದ್ದಿದೆ. ಕೆಲಸ ಮಾಡುತ್ತಿದ್ದ ನಾಲ್ವರು ಅವಶೇಷದಡಿ ಸಿಲುಕಿಕೊಂಡರು.
ನಿರ್ಮಾಣ ಹಂತದ ಮೇಲ್ಛಾವಣಿ ಕುಸಿತದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯ ಪೊಲೀಸರು ಆಗಮಿಸಿದ್ದು, ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ ಇಬ್ಬರನ್ನು ರಕ್ಷಿಸಿದರು. ಅವಶೇಷದಡಿ ಮತ್ತಿಬ್ಬರು ಸಿಲುಕಿಕೊಂಡಿದ್ದು, ಜೆಸಿಬಿ ಬಳಸಿ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಘಟನೆಯಲ್ಲಿ ರಪೀಸಾಬ್, ಬಸವರಾಜು ಇಬ್ಬರು ಕಾರ್ಮಿಕರು ಮೇಲ್ಚಾವಣಿ ಕೆಳಗೆ ಸಿಲುಕಿದ್ದಾರೆ. ರಾಯಚೂರು ಮೂಲದ ಇಬ್ಬರು ಕಾರ್ಮಿಕರಾಗಿದ್ದಾರೆ.