ಬೆಂಗಳೂರು : ವಸತಿ ಸಚಿವ ವಿ.ಸೋಮಣ್ಣ ಅವರಿಗೆ ಕರುಣೆಯೇ ಇಲ್ಲ. ಅವರು ಭಾವನಾತ್ಮಕವಾಗಿ ಹೇಳಿಕೆಗಳನ್ನು ಕೊಡುತ್ತಾ ಜನರನ್ನು ಮರುಳು ಮಾಡಲು ಯತ್ನಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಖಂಡ್ರೆ, ರಾಜ್ಯದ ಜನರಿಗೆ ಮನೆ ಕಟ್ಟಿಕೊಡದಿದ್ದರೆ ನೇಣುಹಾಕಿಕೊಳ್ತೇನೆ ಎಂದು ಸಚಿವ ಸೋಮಣ್ಣ ಹೇಳಿದ್ದಾರೆ. ಮತ್ತೊಂದು ಕಡೆ ಪಿಡಿಒಗಳ ಮೇಲೂ ಆಪಾದನೆ ಮಾಡಿದ್ದಾರೆ. ಹೀಗೆ ಜನರನ್ನ ಭಾವನಾತ್ಮಕವಾಗಿ ಕಟ್ಟಿಹಾಕ್ತಿದ್ದಾರೆ. ಆದರೆ ಅವರು ಹೇಳೋದೆಲ್ಲಾ ಬರೀ ಸುಳ್ಳು. ಈಗಾಗಲೇ 15 ಲಕ್ಷ ವಸತಿ ವಂಚಿತರಿಗೆ ಮನೆ ಕಟ್ಟಲಾಗಿದೆ. 7.65 ಲಕ್ಷ ಮನೆ ಪ್ರಗತಿಯಲ್ಲಿವೆ. ಆ ಮನೆಗಳಿಗೆ ಇನ್ನೂ ಬಾಕಿ ಹಣವನ್ನೇ ಬಿಡುಗಡೆ ಮಾಡಿಲ್ಲ. 2.5 ಲಕ್ಷ ಮನೆಗಳ ಅನುದಾನ ರದ್ದು ಮಾಡಿದ್ದಾರೆ. ಬಡವರ ಹೊಟ್ಟೆಯ ಮೇಲೆ ಹೊಡೆದಿದ್ದಾರೆ. 5.15 ಲಕ್ಷ ಮನೆಗಳ ಸರ್ವೆಗೆ ಮುಂದಾಗಿದ್ದಾರೆ ಎಂದು ದೂರಿದರು.
ಎರಡೂವರೆ ವರ್ಷದಿಂದ ಮನೆ ನಿರ್ಮಾಣ ಕಾರ್ಯ ಅರ್ಧಕ್ಕೆ ನಿಂತಿದೆ ಎಂದು ಆರೋಪಿಸಿದ ಖಂಡ್ರೆ, ಮನೆ ಒಡೆದು ಮನೆ ಕಟ್ಟೋಕೆ ಅಡಿಪಾಯ ಹಾಕಿದ್ದರೂ, ಗುಡಿಸಲಿನಲ್ಲಿದ್ದುಕೊಂಡು ಹೊಸ ಮನೆಯ ಕನಸು ಕಾಣ್ತಿದ್ದ ಬಡ ಫಲಾನುಭವಿಗಳು ಇನ್ನೂ ಪರದಾಡ್ತಿದ್ದಾರೆ. ಇದರ ಬಗ್ಗೆ ವಸತಿ ಸಚಿವರಿಗೆ ಕರುಣೆಯೇ ಇಲ್ಲ. ಆದರೆ ಭಾವನಾತ್ಮಕವಾಗಿ ಹೇಳಿಕೆಗಳನ್ನ ಕೊಡ್ತಿದ್ದಾರೆ. ವಸತಿ ಸಚಿವರು ಯಾರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಖಂಡ್ರೆ ಪ್ರಶ್ನಿಸಿದ್ದಾರೆ.
ಸೂರಿಲ್ಲದವರಿಗೆ ಸೂರು ಕೊಡ್ತೇವೆ ಅಂತಾರೆ. 1 ಲಕ್ಷ ಮನೆ ಯೋಜನೆ ಏನಾಯ್ತು? ವಸತಿ ಯೋಜನೆಯನ್ನೇ ಹಳ್ಳ ಹಿಡಿಸಿದವರು ಅವರು. ಬಡ ಫಲಾನುಭವಿಗಳ ಕಣ್ಣಲ್ಲಿ ನೀರು ತರಿಸ್ತಿದ್ದಾರೆ. ಸೋಮಣ್ಣ ವಸತಿ ಇಲಾಖೆಯಿಂದ ತೊಲಗಿದ್ರೆ ಮಾತ್ರ ಆ ಇಲಾಖೆ ಉದ್ಧಾರವಾಗುತ್ತೆ. ಹೀಗಾಗಿ ಈ ಕೂಡಲೇ ಸೋಮಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.
https://youtu.be/nvEshrTmJgY