ನಾಯಕ ನಟ ಜಗ್ಗೇಶ್ ಅಭಿನಯದ, ಮಠ ಗುರುಪ್ರಸಾದ್ ನಿರ್ದೇಶನದ ಚಿತ್ರ ರಂಗನಾಯಕ ಮಾರ್ಚ್ ನಲ್ಲಿ ತೆರೆಗೆ ಅಪ್ಪಳಿಸಲಿದೆ ಎನ್ನಲಾಗುತ್ತಿದೆ.
ಪುಷ್ಪಕ ವಿಮಾನ ಖ್ಯಾತಿಯ ನಿರ್ಮಾಪಕ ವಿಖ್ಯಾತ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಮಠ, ಎದ್ದೇಳು ಮಂಜುನಾಥ ಚಿತ್ರಗಳ ಮೂಲಕ ಹೊಸ ದಾಖಲೆ ಸೃಷ್ಟಿಸಿದ್ದ ಗುರುಪ್ರಸಾದ್ -ಜಗ್ಗೇಶ್ ಜೋಡಿಯು ಮತ್ತೊಮ್ಮೆ ಜನರನ್ನು ನಗಿಸಲು ಬರುತ್ತಿದೆ. ಈ ಚಿತ್ರವು ಶಿವರಾತ್ರಿಯಂದು ಅಂದರೆ ಮಾರ್ಚ್ 8ರಂದು ಬಿಡುಗಡೆಯಾಗಲು ಸಿದ್ಧವಾಗಿ ನಿಂತಿದೆ.
ಜಗ್ಗೇಶ್, ಚೈತ್ರ ಕೊಟ್ಟೂರು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಇದು ಗುರುಪ್ರಸಾದ್ ಅವರ ಪ್ರಸಾದ ಎನ್ನುತ್ತ ಮಠ ಹಾಗೂ ಎದ್ದೇಳು ಮಂಜುನಾಥ ಸಿನಿಮಾದ ನೆನಪುಗಳನ್ನ ಮೆಲುಕು ಹಾಕಿದರು. ಗುರುಪ್ರಸಾದ್ ಜಗಮೊಂಡ, ಆತ ಯಾರು ಮಾತೂ ಕೇಳಲ್ಲ. ಮದವೇರಿದ ಒಂಟಿ ಸಲಗನಂತೆ ಎಂದು ನಿರ್ದೇಶಕರ ಕಾರ್ಯವೈಖರಿಯನ್ನು ಜಗ್ಗೇಶ್ ಮೆಚ್ಚಿದ್ದಾರೆ.