ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಪೌರಾಣಿಕವಾಗಿಯೂ ಶ್ರೇಷ್ಟ, ಧಾರ್ಮಿಕ ನಂಬಿಕೆಯಲ್ಲಿ ಉಚ್ಛ ಸ್ಥಾನ ಪಡೆದ ಅಶೋಕ ವೃಕ್ಷದ ಆಯುರ್ವೇದಿಕ್ ಮಹತ್ವ ನಿಮಗೆಷ್ಟು ಗೊತ್ತು?

admin by admin
August 18, 2020
in Health, Newsbeat, ಆರೋಗ್ಯ
Share on FacebookShare on TwitterShare on WhatsappShare on Telegram

ಪೌರಾಣಿಕವಾಗಿಯೂ ಶ್ರೇಷ್ಟ, ಧಾರ್ಮಿಕ ನಂಬಿಕೆಯಲ್ಲಿ ಉಚ್ಛ ಸ್ಥಾನ ಪಡೆದ ಅಶೋಕ ವೃಕ್ಷದ ಆಯುರ್ವೇದಿಕ್ ಮಹತ್ವ ನಿಮಗೆಷ್ಟು ಗೊತ್ತು?

ಅಶೋಕ ಹಿಂದೂ ಸಂಸ್ಕೃತಿಯಲ್ಲಿ ಒಂದು ಪರಮಪಾವನ ವೃಕ್ಷ. ರಾವಣ ಸೀತಾಮಾತೆಯನ್ನು ಅಪಹರಿಸಿ ಈ ಅಶೋಕ ವೃಕ್ಷಗಳಿಂದ ಕೂಡಿದ ವನದಲ್ಲಿಯೇ ಅಡಗಿಸಿಟ್ಟಿದ್ದನಂತೆ. ಕಾಳಿದಾಸನ ಕಾಲದಲ್ಲಂತೂ ಈ ಮರಕ್ಕೆ ಇನ್ನಿಲ್ಲದ ಪ್ರಾಶಸ್ತ್ಯ ದೊರೆತಿದೆ. ವಸಂತಕಾಲದಲ್ಲಿ ಒಂದು ನಿಶ್ಚಿತ ದಿನದಂದು ಯುವತಿಯೊಬ್ಬಳು ತನ್ನ ಎಡಗಾಲಿನಿಂದ ಮೃದುವಾಗಿ ಅಶೋಕವೃಕ್ಷವನ್ನು ಒದ್ದರೆ ಆ ಮರದಲ್ಲಿ ಗರ್ಭಾಂಕುರವಾಗುತ್ತಿತ್ತೆಂದು ಭೋಜರಾಜನ ಸರಸ್ವತೀ ಕಂಠಾಭರಣ, ಕಾಳಿದಾಸನ ಮಾಲವಿಕಾಗ್ನಿಮಿತ್ರ, ಹರ್ಷನ ರತ್ನಾವಳೀ ಗ್ರಂಥಗಳಲ್ಲಿ ಹೇಳಲಾಗಿದೆ. ಚೈತ್ರ ಶುಕ್ಲ ಅಷ್ಟಮಿಯಂದು ವ್ರತ ಮಾಡಿ ಅಶೋಕದ ಎಂಟು ಎಲೆಗಳನ್ನು ತಿಂದರೆ ಸ್ತ್ರೀಯರಿಗೆ ಸಂತಾನ ಪ್ರಾಪ್ತಿಯಾಗುವುದೆಂಬ ನಂಬಿಕೆ ಇದೆ. ಇನ್ನು ಗೌತಮ ಬುದ್ಧನೂ ಸಹ ಅಶೋಕವನದಲ್ಲಿಯೇ ಜನಿಸಿದ್ದನೆಂಬ ಪ್ರತೀತಿ ಇದೆ. ಹೀಗಾಗಿ ಬೌದ್ಧವಿಹಾರಗಳಲ್ಲಿ ಈ ಮರಗಳಿಗೆ ವಿಶೇಷ ಪ್ರಾಧಾನ್ಯತೆ ಇರುತ್ತದೆ.

Related posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

August 5, 2026
‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

August 5, 2026

ಅಶೋಕ ನಿಧಾನವಾಗಿ ಬೆಳೆಯುವ ನಿತ್ಯ ಹಸಿರಿನ ಮರ. ನೀಳವಾಗಿ ಚೂಪಾಗಿರುವ ಎಲೆಗಳಿಂದ ಕೂಡಿದ ಮರದ ತುಂಬಾ ಗೊಂಚಲು ಗೊಂಚಲು ಹೂಗಳಿರುತ್ತವೆ. ಈ ಗಿಡದ ಕಾಯಿಗಳು ಕಂದು ಬಣ್ಣದವಾಗಿರುತ್ತವೆ. ಹತ್ತು ಸೆಂಟಿಮೀಟರ್ ಉದ್ದವಾಗಿರುವ ಕಾಯಿಗಳ ಒಳಗಡೆ ಸಾಲಾಗಿ ಬೀಜಗಳಿರುತ್ತವೆ. ಈ ಮರಗಳು ಈಶಾನ್ಯ ಭಾರತದ ಕಾಡುಗಳಲ್ಲಿ ಹಾಗೂ ಕರ್ನಾಟಕದಲ್ಲಿ ಹೇರಳವಾಗಿ ಕಂಡುಬರುತ್ತವೆ. ಗಂಧಪುಷ್ಪ, ಹೇಮಪುಷ್ಪ, ಪಿಂಡಪುಷ್ಪ, ತಾಮ್ರಪುಷ್ಪ, ಶಂಕೇಲಿ, ರಕ್ತಪಲ್ಲವ ಇವು ಅಶೋಕದ ಪರ್ಯಾಯ ಪದಗಳು.

ಸಸ್ಯಶಾಸ್ತ್ರದಲ್ಲಿ ಅಶೋಕ ಮರಕ್ಕೆ ಸೆರೆಕಾ ಇಂಡಿಕಾ ಎಂಬ ಹೆಸರಿದೆ. ಹೆಸರೇ ಹೇಳುವಂತೆ ಅಶೋಕ ಎಂದರೆ ಶೋಕವಿಲ್ಲದ್ದು ಎಂಬ ಅರ್ಥವಿದೆ. ಚರಕ ಸಂಹಿತೆಯಲ್ಲಿ ಅಶೋಕವೃಕ್ಷದ ಔಷಧೀಯ ಗುಣಗಳ ಉಲ್ಲೇಖವಿದೆ. ಮರದ ತೊಗಟೆ, ಹೂ, ಬೀಜಗಳನ್ನು ಒಣಗಿಸಿ, ಪುಡಿ ಮಾಡಿ ಬಳಸುತ್ತಾರೆ. ಅಶೋಕಾರಿಷ್ಟ, ಅಶೋಕಘೃತ ಎಂಬ ಔಷಧಿಗಳನ್ನು ನಾವು ಆಯುರ್ವೇದದ ಅಂಗಡಿಗಳಲ್ಲಿ ಕಾಣಬಹುದು. ತೊಗಟೆಯಲ್ಲಿ ಟ್ಯಾನಿನ್ ಅಂಶವಿರುತ್ತದೆ. ತೊಗಟೆಯ ಪುಡಿಯನ್ನು ಸ್ವಲ್ಪ ಚಹಾದೊಂದಿಗೆ ಸೇರಿಸುವುದರಿಂದ ಚಹಾದ ರುಚಿ ಹಾಗೂ ಬಣ್ಣದಲ್ಲಿ ಹೆಚ್ಚಳವಾಗುವುದು.

ಅಶೋಕ ಚಕ್ಕೆಯು ಸ್ತ್ರೀಯರ ಆರೋಗ್ಯದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಅಶೋಕ ಮರದ ಚಕ್ಕೆಯ ಪುಡಿಯನ್ನು ತುಪ್ಪದ ಜೊತೆ ಬೆರೆಸಿ ಸೇವಿಸುವುದರಿಂದ ಗರ್ಭಾಂಗಗಳು ದಷ್ಟಪುಷ್ಟವಾಗುತ್ತದೆ. ಅಶೋಕವೃಕ್ಷದ ಬೀಜವನ್ನು 3 ರಿಂದ 6 ಗ್ರಾಂ ನಷ್ಟು ಬಿಸಿನೀರು ಅಥವಾ ಹಾಲಿನಲ್ಲಿ ಸೇವಿಸುವುದರಿಂದ ಮೂತ್ರ ಕಲ್ಲು, ಮೂತ್ರ ಮಾಡುವಾಗ ಉಂಟಾಗುವ ತೊಂದರೆಗಳ ನಿವಾರಣೆಯಾಗುತ್ತದೆ. ಅಶೋಕ ಚೂರ್ಣ, ಜೀರಿಗೆ ಪುಡಿ, ಕಲ್ಲುಸಕ್ಕರೆಯನ್ನು ನೀರಿನಲ್ಲಿ ಮಿಶ್ರಣ ಮಾಡಿ ಕುಡಿಯುವುದರಿಂದ ರಕ್ತಪಿತ್ತ ರೋಗವು ನಿವಾರಣೆಯಾಗುತ್ತದೆ. ಅಶೋಕ ಚಕ್ಕೆಯ ಕಷಾಯ ಅಥವಾ ಪುಡಿಯನ್ನು ಸೇವಿಸುವುದರಿಂದ ರಕ್ತಮೂಲವ್ಯಾಧಿ ನಿವಾರಣೆಯಾಗುತ್ತದೆ. ಅಶೋಕ ವೃಕ್ಷದ ಹೂವುಗನ್ನು ನುಣ್ಣಗೆ ಅರೆದು ಕೊಬ್ಬರಿ ಎಣ್ಣೆಯಲ್ಲಿ ಕುದಿಸಿ, ಬರುವ ಎಣ್ಣೆಯನ್ನು ಚರ್ಮಕ್ಕೆ ಹಚ್ಚುವುದರಿಂದ ಚರ್ಮರೋಗಕ್ಕೆ ಒಳ್ಳೆಯದು.

ಮಾಹಿತಿ ಮತ್ತು ಲೇಖನ:- ಅಂಬಿಕಾ ಸೀತೂರು

Tags: # Ashoka Tree#Ashoka#ayurvedic significance#Hindu culture.#saakshatv#saakshatv.combengaluruhindukarnataka
ShareTweetSendShare
Join us on:

Related Posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

by Shwetha
August 5, 2026
0

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತ-ಇಸ್ರೇಲ್ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಅತ್ಯುತ್ತಮ ಸ್ನೇಹಿತರಲ್ಲಿ ಒಬ್ಬರು ಎಂದು ಹೇಳಿದ್ದಾರೆ....

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

by Shwetha
August 5, 2026
0

ನೂತನ ಸಚಿವ ಸಂಪುಟ ರಚನೆಯ ಬಳಿಕ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲವು ಹಿರಿಯ ಶಾಸಕರ ಅಸಮಾಧಾನದ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದಾರೆ....

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ನಾಯಕರಿಗೆ ಹಿರಿಯ ಮುಖಂಡ, ಮಾಜಿ ಸಚಿವ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram