ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಪೌರಾಣಿಕವಾಗಿಯೂ ಶ್ರೇಷ್ಟ, ಧಾರ್ಮಿಕ ನಂಬಿಕೆಯಲ್ಲಿ ಉಚ್ಛ ಸ್ಥಾನ ಪಡೆದ ಅಶೋಕ ವೃಕ್ಷದ ಆಯುರ್ವೇದಿಕ್ ಮಹತ್ವ ನಿಮಗೆಷ್ಟು ಗೊತ್ತು?

admin by admin
August 18, 2020
in Health, Newsbeat, ಆರೋಗ್ಯ
Share on FacebookShare on TwitterShare on WhatsappShare on Telegram

ಪೌರಾಣಿಕವಾಗಿಯೂ ಶ್ರೇಷ್ಟ, ಧಾರ್ಮಿಕ ನಂಬಿಕೆಯಲ್ಲಿ ಉಚ್ಛ ಸ್ಥಾನ ಪಡೆದ ಅಶೋಕ ವೃಕ್ಷದ ಆಯುರ್ವೇದಿಕ್ ಮಹತ್ವ ನಿಮಗೆಷ್ಟು ಗೊತ್ತು?

ಅಶೋಕ ಹಿಂದೂ ಸಂಸ್ಕೃತಿಯಲ್ಲಿ ಒಂದು ಪರಮಪಾವನ ವೃಕ್ಷ. ರಾವಣ ಸೀತಾಮಾತೆಯನ್ನು ಅಪಹರಿಸಿ ಈ ಅಶೋಕ ವೃಕ್ಷಗಳಿಂದ ಕೂಡಿದ ವನದಲ್ಲಿಯೇ ಅಡಗಿಸಿಟ್ಟಿದ್ದನಂತೆ. ಕಾಳಿದಾಸನ ಕಾಲದಲ್ಲಂತೂ ಈ ಮರಕ್ಕೆ ಇನ್ನಿಲ್ಲದ ಪ್ರಾಶಸ್ತ್ಯ ದೊರೆತಿದೆ. ವಸಂತಕಾಲದಲ್ಲಿ ಒಂದು ನಿಶ್ಚಿತ ದಿನದಂದು ಯುವತಿಯೊಬ್ಬಳು ತನ್ನ ಎಡಗಾಲಿನಿಂದ ಮೃದುವಾಗಿ ಅಶೋಕವೃಕ್ಷವನ್ನು ಒದ್ದರೆ ಆ ಮರದಲ್ಲಿ ಗರ್ಭಾಂಕುರವಾಗುತ್ತಿತ್ತೆಂದು ಭೋಜರಾಜನ ಸರಸ್ವತೀ ಕಂಠಾಭರಣ, ಕಾಳಿದಾಸನ ಮಾಲವಿಕಾಗ್ನಿಮಿತ್ರ, ಹರ್ಷನ ರತ್ನಾವಳೀ ಗ್ರಂಥಗಳಲ್ಲಿ ಹೇಳಲಾಗಿದೆ. ಚೈತ್ರ ಶುಕ್ಲ ಅಷ್ಟಮಿಯಂದು ವ್ರತ ಮಾಡಿ ಅಶೋಕದ ಎಂಟು ಎಲೆಗಳನ್ನು ತಿಂದರೆ ಸ್ತ್ರೀಯರಿಗೆ ಸಂತಾನ ಪ್ರಾಪ್ತಿಯಾಗುವುದೆಂಬ ನಂಬಿಕೆ ಇದೆ. ಇನ್ನು ಗೌತಮ ಬುದ್ಧನೂ ಸಹ ಅಶೋಕವನದಲ್ಲಿಯೇ ಜನಿಸಿದ್ದನೆಂಬ ಪ್ರತೀತಿ ಇದೆ. ಹೀಗಾಗಿ ಬೌದ್ಧವಿಹಾರಗಳಲ್ಲಿ ಈ ಮರಗಳಿಗೆ ವಿಶೇಷ ಪ್ರಾಧಾನ್ಯತೆ ಇರುತ್ತದೆ.

Related posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

May 4, 2026
ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

May 4, 2026

ಅಶೋಕ ನಿಧಾನವಾಗಿ ಬೆಳೆಯುವ ನಿತ್ಯ ಹಸಿರಿನ ಮರ. ನೀಳವಾಗಿ ಚೂಪಾಗಿರುವ ಎಲೆಗಳಿಂದ ಕೂಡಿದ ಮರದ ತುಂಬಾ ಗೊಂಚಲು ಗೊಂಚಲು ಹೂಗಳಿರುತ್ತವೆ. ಈ ಗಿಡದ ಕಾಯಿಗಳು ಕಂದು ಬಣ್ಣದವಾಗಿರುತ್ತವೆ. ಹತ್ತು ಸೆಂಟಿಮೀಟರ್ ಉದ್ದವಾಗಿರುವ ಕಾಯಿಗಳ ಒಳಗಡೆ ಸಾಲಾಗಿ ಬೀಜಗಳಿರುತ್ತವೆ. ಈ ಮರಗಳು ಈಶಾನ್ಯ ಭಾರತದ ಕಾಡುಗಳಲ್ಲಿ ಹಾಗೂ ಕರ್ನಾಟಕದಲ್ಲಿ ಹೇರಳವಾಗಿ ಕಂಡುಬರುತ್ತವೆ. ಗಂಧಪುಷ್ಪ, ಹೇಮಪುಷ್ಪ, ಪಿಂಡಪುಷ್ಪ, ತಾಮ್ರಪುಷ್ಪ, ಶಂಕೇಲಿ, ರಕ್ತಪಲ್ಲವ ಇವು ಅಶೋಕದ ಪರ್ಯಾಯ ಪದಗಳು.

ಸಸ್ಯಶಾಸ್ತ್ರದಲ್ಲಿ ಅಶೋಕ ಮರಕ್ಕೆ ಸೆರೆಕಾ ಇಂಡಿಕಾ ಎಂಬ ಹೆಸರಿದೆ. ಹೆಸರೇ ಹೇಳುವಂತೆ ಅಶೋಕ ಎಂದರೆ ಶೋಕವಿಲ್ಲದ್ದು ಎಂಬ ಅರ್ಥವಿದೆ. ಚರಕ ಸಂಹಿತೆಯಲ್ಲಿ ಅಶೋಕವೃಕ್ಷದ ಔಷಧೀಯ ಗುಣಗಳ ಉಲ್ಲೇಖವಿದೆ. ಮರದ ತೊಗಟೆ, ಹೂ, ಬೀಜಗಳನ್ನು ಒಣಗಿಸಿ, ಪುಡಿ ಮಾಡಿ ಬಳಸುತ್ತಾರೆ. ಅಶೋಕಾರಿಷ್ಟ, ಅಶೋಕಘೃತ ಎಂಬ ಔಷಧಿಗಳನ್ನು ನಾವು ಆಯುರ್ವೇದದ ಅಂಗಡಿಗಳಲ್ಲಿ ಕಾಣಬಹುದು. ತೊಗಟೆಯಲ್ಲಿ ಟ್ಯಾನಿನ್ ಅಂಶವಿರುತ್ತದೆ. ತೊಗಟೆಯ ಪುಡಿಯನ್ನು ಸ್ವಲ್ಪ ಚಹಾದೊಂದಿಗೆ ಸೇರಿಸುವುದರಿಂದ ಚಹಾದ ರುಚಿ ಹಾಗೂ ಬಣ್ಣದಲ್ಲಿ ಹೆಚ್ಚಳವಾಗುವುದು.

ಅಶೋಕ ಚಕ್ಕೆಯು ಸ್ತ್ರೀಯರ ಆರೋಗ್ಯದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಅಶೋಕ ಮರದ ಚಕ್ಕೆಯ ಪುಡಿಯನ್ನು ತುಪ್ಪದ ಜೊತೆ ಬೆರೆಸಿ ಸೇವಿಸುವುದರಿಂದ ಗರ್ಭಾಂಗಗಳು ದಷ್ಟಪುಷ್ಟವಾಗುತ್ತದೆ. ಅಶೋಕವೃಕ್ಷದ ಬೀಜವನ್ನು 3 ರಿಂದ 6 ಗ್ರಾಂ ನಷ್ಟು ಬಿಸಿನೀರು ಅಥವಾ ಹಾಲಿನಲ್ಲಿ ಸೇವಿಸುವುದರಿಂದ ಮೂತ್ರ ಕಲ್ಲು, ಮೂತ್ರ ಮಾಡುವಾಗ ಉಂಟಾಗುವ ತೊಂದರೆಗಳ ನಿವಾರಣೆಯಾಗುತ್ತದೆ. ಅಶೋಕ ಚೂರ್ಣ, ಜೀರಿಗೆ ಪುಡಿ, ಕಲ್ಲುಸಕ್ಕರೆಯನ್ನು ನೀರಿನಲ್ಲಿ ಮಿಶ್ರಣ ಮಾಡಿ ಕುಡಿಯುವುದರಿಂದ ರಕ್ತಪಿತ್ತ ರೋಗವು ನಿವಾರಣೆಯಾಗುತ್ತದೆ. ಅಶೋಕ ಚಕ್ಕೆಯ ಕಷಾಯ ಅಥವಾ ಪುಡಿಯನ್ನು ಸೇವಿಸುವುದರಿಂದ ರಕ್ತಮೂಲವ್ಯಾಧಿ ನಿವಾರಣೆಯಾಗುತ್ತದೆ. ಅಶೋಕ ವೃಕ್ಷದ ಹೂವುಗನ್ನು ನುಣ್ಣಗೆ ಅರೆದು ಕೊಬ್ಬರಿ ಎಣ್ಣೆಯಲ್ಲಿ ಕುದಿಸಿ, ಬರುವ ಎಣ್ಣೆಯನ್ನು ಚರ್ಮಕ್ಕೆ ಹಚ್ಚುವುದರಿಂದ ಚರ್ಮರೋಗಕ್ಕೆ ಒಳ್ಳೆಯದು.

ಮಾಹಿತಿ ಮತ್ತು ಲೇಖನ:- ಅಂಬಿಕಾ ಸೀತೂರು

Tags: # Ashoka Tree#Ashoka#ayurvedic significance#Hindu culture.#saakshatv#saakshatv.combengaluruhindukarnataka
ShareTweetSendShare
Join us on:

Related Posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

by Shwetha
May 4, 2026
0

ಮುಂಬೈ: ಭಾರತದ ಮೇಲೆ ನಡೆದ ಸರಣಿ ವಿದೇಶಿ ಆಕ್ರಮಣಗಳು ಮತ್ತು ನೂರಾರು ವರ್ಷಗಳ ಸಂಕಷ್ಟದ ಕಾಲದಲ್ಲೂ ದೇಶದ ಮೂಲ ಗುರುತು ಹಾಗೂ ಸಾಂಸ್ಕೃತಿಕ ಆತ್ಮವನ್ನು ಸಂರಕ್ಷಿಸಿರುವುದು ಆದಿವಾಸಿ...

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

by Shwetha
May 4, 2026
0

ಕುಸ್ತಿ ಲೋಕದಲ್ಲಿ ಮತ್ತು ದೇಶದ ಕ್ರೀಡಾ ವಲಯದಲ್ಲಿ ಬೆಚ್ಚಿಬೀಳಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಖ್ಯಾತ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮಗೆ ಎದುರಾದ ಕಹಿ ಘಟನೆಯನ್ನು ಸಾರ್ವಜನಿಕವಾಗಿ...

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

by Shwetha
May 4, 2026
0

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಆಸ್ತಿ ದಾಖಲೆಗಳಿಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸಂಕಷ್ಟ ತಪ್ಪಲಿದ್ದು, ನೇರವಾಗಿ...

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

by Shwetha
May 4, 2026
0

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳೇ ಕಳೆದಿವೆ. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದರ್ಶನ್, ಅಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram