ರಾಜ್ಯದಲ್ಲಿ ಜಾತಿ ಸಮೀಕ್ಷೆ : ಸಿದ್ದರಾಮಯ್ಯ ಹೇಳಿದ್ದೇನು..?
ಹುಬ್ಬಳ್ಳಿ : ರಾಜ್ಯದಲ್ಲಿ ಜಾತಿ ಸಮೀಕ್ಷೆ ನಡೆದು ಎರಡೂವರೆ ಆಯ್ತು. ಅದರ ವರದಿಯನ್ನ ಸಲ್ಲಿಕೆ ಮಾಡಲಾಗಿದ್ರು. ಆ ಕುರಿತು ಸದನದಲ್ಲಿ ಚರ್ಚೆ ಆಗುತ್ತಿಲ್ಲ.
ಚರ್ಚೆ ಮಾಡಿದ್ರೆ ಸಾಮಾಜಿಕ ನ್ಯಾಯ ಒದಗಿಸಬೇಕಾಗುತ್ತದೆ. ಹೀಗಾಗಿ ಆ ಬಗ್ಗೆ ಚರ್ಚೆ ಮಾಡುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಜಾತಿಗಣತಿ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನಿಗೆ ಈ ಮೇಲಿನ ಉತ್ತರ ಕೊಟ್ಟರು.
ಇನ್ನು ಇದೇ ವೇಳೆ ಕೆಆರ್ ಎಸ್, ಅಕ್ರಮ ಗಣಿಗಾರಿಕೆ ವಿಚಾರವಾಗಿ ಸಂಸದೆ ಸುಮಲತಾ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಸಂಸದೆ ಸುಮಲತಾ ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿದ್ದಾರೆ.
ಆದರೆ ಸ್ವತಃ ರಾಜ್ಯ ಸರ್ಕಾರವೇ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿದೆ. ಸರ್ಕಾರ ಭ್ರಷ್ಟಾಚಾರದಲ್ಲಿ ಭಾಗಿಯಾದ ಪರಿಣಾಮ ಸುಮಲತಾರ ಆರೋಪಕ್ಕೆ ಸರ್ಕಾರದಿಂದ ಉತ್ತರ ದೊರೆಯುತ್ತಿಲ್ಲ ಎಂದರು.
ಸುಮಲತಾರವರು ಕೆಆರ್ ಎಸ್ ಡ್ಯಾಂ ಬಿರುಕು ಬಿಟ್ಟಿದೆ ಎಂದು ಆರೋಪ ಮಾಡಿದ್ದಾರೆ. ಅವರು ಆರೋಪ ಮಾಡಿದ ನಂತರ ಸರ್ಕಾರವಾಗಲಿ, ಗಣಿ ಇಲಾಖೆ ಆದರೂ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಬೇಕಾಗಿತ್ತು.
ಕೆಆರ್ ಎಸ್ ಸುತ್ತಮುತ್ತಲಿನ 20 ಕೀಲೋ ಮೀಟರ್ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಜೆಡಿಎಸ್ ನಾಯಕರ ಗಣಿ ಕಂಪನಿಗಳು ಇವೆ ಅಂತಾ ಆರೋಪ ಮಾಡಿದ್ದಾರೆ. ಆದರೆ ಸರ್ಕಾರ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಿಡಿಕಾರಿದ್ರು.