Bangalore ಬೆಂಗಳೂರಿನಲ್ಲಿ ಹುಬ್ಬಳ್ಳಿ ಮೂಲದ ಕೂಲಿ ಕಾರ್ಮಿಕನ ಕೊಲೆ
ಬೆಂಗಳೂರು : ಹುಬ್ಬಳ್ಳಿ ಮೂಲದ ಕೂಲಿ ಕಾರ್ಮಿಕನನ್ನು ಬೆಂಗಳೂರಿನಲ್ಲಿ ಕೊಲೆ ಮಾಡಲಾಗಿದೆ.
ವಿದ್ಯಾರಣಪುರ ಪೊಲೀಸ್ ಠಾಣಾ ವ್ಯಾಪ್ತಿಯ ತಿಂಡ್ಲು ಬಳಿ ಈ ಘಟನೆ ನಡೆದಿದ್ದು, 25 ವರ್ಷದ ಪ್ರಕಾಶ್ ಹತ್ಯೆಯಾದವನಾಗಿದ್ದಾರೆ.
ಹಲವು ವರ್ಷಗಳ ಹಿಂದೆ ನಗರಕ್ಕೆ ಬಂದು ಜೀವನಕ್ಕಾಗಿ ಗಾರೆ ಕೆಲಸ ಮಾಡಿಕೊಂಡು ತಿಂಡ್ಲು ಬಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ.
ಎಂದಿನಂತೆ ನಿನ್ನೆ ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದ. ಆದರೆ, ಇಂದು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ವಿದ್ಯಾರಣ್ಯಪುರ ಪೊಲೀಸರು ಭೇಟಿ ನೀಡಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿದ್ದಾರೆ.