ವಿಶ್ವಗುರು ಬಸವಣ್ಣನಿಗೆ ಸರಿ ಸಮಾನವಾಗಿ ಸಿಎಂ ಸಿದ್ದರಾಮಯ್ಯ ಕಟೌಟ್ ಹಾಕಿದ್ದಕ್ಕೆ ಬಸವ ಭಕ್ತರಿಂದ ಆಕ್ರೋಶ ವ್ಯಕ್ತವಾಗಿದೆ.
ಬಸವಣ್ಣನವರನ್ನು ಕರ್ನಾಟಕ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯರನ್ನು ಸನ್ಮಾನಿಸುವುದಕ್ಕಾಗಿ ತೇರು ಮೈದಾನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಈ ವೇಳೆ ಮೈದಾನದ ಸುತ್ತಮುತ್ತ ಸಿಎಂ ಕಟೌಟ್ ಹಾಕಲಾಗಿತ್ತು. ಆದರೆ, ಸಿಎಂ ಕಟೌಟ್ ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಇದನ್ನು ಹಲವರು ಕಟುವಾಗಿ ಟೀಕಿಸಿದ್ದು, ವಿಶ್ವಕ್ಕೆ ಸಮಾನತೆ ಸಂದೇಶ ಸಾರಿದ ವಿಶ್ವಗುರು ಬಸವಣ್ಣ ಎಲ್ಲಿ? ಜಾತಿವಾದಿ ಸಿಎಂ ಸಿದ್ದರಾಮಯ್ಯ ಎಲ್ಲಿ ಎಂದು? ಪ್ರಶ್ನಿಸುತ್ತಿದ್ದಾರೆ. ಬಸವಣ್ಣನನ್ನು ಕನ್ನಡದ ಸಾಂಸ್ಕೃತಿಕ ನಾಯಕ ಮಾಡಿದ್ದಕ್ಕೆ ಹೆಮ್ಮೆ ಇದೆ. ಆದರೆ, ಸಿಎಂರೊಂದಿಗೆ ಹೋಲಿಕೆಗೆ ಮಿತಿ ಇರಬೇಕು. ಬಸವಣ್ಣನವರು ಜಾತಿ ರಹಿತ ಸಮಾಜದ ಸಂದೇಶ ಸಾರಿದ್ದಾರೆ. ಆದರೆ, ಸಿದ್ದರಾಮಯ್ಯ ಜಾತಿವಾದಿ. ಹೀಗಾಗಿ ಅವರ ಸರಿಸಮಾನವಾಗಿ ಕಟೌಟ್ ಹಾಕಬಾರದು ಎಂದು ಸಾಮಾಜಿಕ ಜಾಲತಾಣದಲ್ಲಿ ಹಲವರು ಆಕ್ಷೇಪ ವ್ಯಕ್ತವಾಗಿದೆ.