ಮಂಗಳೂರು, ಮೇ 19 : ರಾಜ್ಯದ ಕರಾವಳಿ ಜಿಲ್ಲೆಗಳು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರ ( ಮೇ19 ಮತ್ತು 20) ಅಂಫನ್ ಚಂಡಮಾರುತ ಪ್ರಭಾವದಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಈ ಪ್ರದೇಶಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದ್ದು ಗುಡುಗು, ಸಿಡಿಲು, ಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ. ಅರಬ್ಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತ ಹಾಗೂ ಪೂರ್ವ ಕರಾವಳಿಯಲ್ಲಿ ತಲೆದೋರಿರುವ ಚಂಡಮಾರುತಗಳಿಂದಾಗಿ 64ಮಿ.ಮೀ.ನಿಂದ 115 ಮಿ.ಮೀ.ನಷ್ಟು ಮಳೆ ಸುರಿಯಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ
ಕಾಠ್ಮಂಡು: ಇತ್ತೀಚಿನ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನಲುಗಿ ಹೋಗಿರುವ ನೇಪಾಳ, ಇದೀಗ ಜಗತ್ತಿನ ಬಲಿಷ್ಠ ರಾಷ್ಟ್ರಗಳ ವಿರುದ್ಧ ತಿರುಗಿಬಿದ್ದಿದೆ. ಸಾವಿರಾರು ಜೀವಗಳನ್ನು ಬಲಿಪಡೆದ ಈ ನೈಸರ್ಗಿಕ...








