ಸಪ್ತಪದಿ ತುಳಿದವಳನ್ನು ಸಪ್ತದಿನಗಳಲ್ಲಿ ಕೈಬಿಟ್ಟ
ತುಮಕೂರು: ಮದುವೆಯಾದ ಏಳನೇ ದಿನಕ್ಕೆ ಪತ್ನಿಯನ್ನು ಬಿಟ್ಟು ಪತಿ ಪರಾರಿಯಾಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಿಂಡಿಸ್ಕೆರೆ ಗ್ರಾಮದಲ್ಲಿ.
ಪತ್ನಿ ಚೈತ್ರಾ ಮತ್ತು ನಿಖಿಲ್ ಮದುವೆಯಾಗಿದ್ದರು. ಮನೆಯವರ ವಿರೋಧದ ನಡುವೆಯೂ ಇಬ್ಬರೂ ಮದುವೆಯಾಗಿದ್ದರು. ಆದರೆ ನಿಖಿಲ್ ಹೆಂಡತಿಯನ್ನು ಬಿಟ್ಟು ಪರಾರಿಯಾಗಿದ್ದು, ಗಂಡನನ್ನು ಹುಡುಕಿಕೊಡುವಂತೆ ಚೈತ್ರಾ ಕಣ್ಣೀರು ಹಾಕಿದ್ದಾಳೆ.
ಚೈತ್ರಾ ಕಳೆದ ಒಂದು ವರ್ಷದಿಂದ ಪ್ರೀತಿಸುತ್ತಿದ್ದರು. ವಿಶ್ವಕರ್ಮ ಸಮುದಾಯದ ಚೈತ್ರಾ ಮೂಲತಃ ತಿಪಟೂರು ತಾಲೂಕಿನ ಹಟ್ನ ಗ್ರಾಮದವಳು. ನಿಖಿಲ್ ಲಿಂಗಾಯತ ಸಮುದಾಯದವನು. ತುರುವೇಕೆರೆಯ ಮೊಬೈಲ್ ಶಾಪ್ ಒಂದರಲ್ಲಿ ಚೈತ್ರಾ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದಳು. ಅದೇ ಮೊಬೈಲ್ ಶಾಪ್ ಫೈನಾನ್ಸ್ ವಿಭಾಗದಲ್ಲಿ ನಿಖಿಲ್ ಕೆಲಸ ಮಾಡುತ್ತಿದ್ದ.
ಈ ವೇಳೆ ಇಬ್ಬರ ನಡುವೆ ಪ್ರೀತಿ ಬೆಳೆದಿತ್ತು. ಮದವೆಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಮನೆಯವರ ವಿರೋಧದ ನಡುವೆಯೂ ಕಳೆದ ಫೆಬ್ರವರಿ 4ರಂದು ನಿಖಿಲ್ ಮತ್ತು ಚೈತ್ರಾ ಮದುವೆಯಾಗಿತ್ತು.ಫೆಬ್ರವರಿ 7ಕ್ಕೆ ರಿಜಿಸ್ಟರ್ ಮ್ಯಾರೇಜ್ ಕೂಡ ಆಗಿದ್ದರು. ತಿಪಟೂರು ತಾಲೂಕು ಕಿಬ್ಬನಳ್ಳಿ ಬಳಿಯ ಇಂಡಿಸ್ಕೆರೆ ಗ್ರಾಮದಲ್ಲಿ ಮನೆಮಾಡಿದ್ದರು.
ಆದರೆ ನಿಖಲ್ ಫೆಬ್ರವರಿ 10ರಂದು ತಾಯಿಗೆ ಹುಷಾರಿಲ್ಲ ಎಂದು ತಿಪಟೂರಿಗೆ ಹೋದ. ಮನೆಗೆ ಹೋದ ಕೆಲವೇ ಗಂಟೆಗಳಲ್ಲಿ ಎರಡೂ ಮೊಬೈಲ್ ಸ್ವಿಚ್ ಆಪ್ ಮಾಡಿದ್ದಾನೆ. ಚೈತ್ರಾ ಎಷ್ಟೇ ಪ್ರಯತ್ನ ಪಟ್ಟರು ನಿಖಿಲ್ ಸಂಪರ್ಕಕ್ಕೆ ಸಿಗುತ್ತಿಲ್ಲ. ಗಂಡನನ್ನ ಹುಡುಕಿಕೊಂಡು ಚೈತ್ರಾ ನಿಖಲ್ ಮನೆಗೆ ಹೋಗಿದ್ದಾಳೆ. ಆಗ ಚೈತ್ರಾಗೆ ನಿಖಿಲ್ ತಂದೆ ಬಸವರಾಜು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪ ಕೇಳಿಬಂದಿದೆ.
ನಿನ್ನ ಮೇಲೆಯೇ ದೂರು ಕೊಡುತ್ತೇನೆ ಅಂತ ಬೆದರಿಕೆ ಹಾಕಿದ್ದಾರೆ ಎಂದು ಚೈತ್ರಾ ಆರೋಪಿಸಿದ್ದಾನೆ. ಗಂಡನನ್ನ ಹುಡುಕಿಕೊಡಿ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಸದ್ಯ ಈ ಪ್ರಕರಣ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.