ಮಡಿಕೇರಿ: ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ (Congress) ಪಕ್ಷದ ಟಿಕೆಟ್ ಆಕಾಂಕ್ಷಿ ನಾನು ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ( H Vishwanath) ಹೇಳಿದ್ದಾರೆ.
ಮಡಿಕೇರಿಯಲ್ಲಿ (Madikeri) ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರಿಗೂ ಟಿಕೆಟ್ ನೀಡುತ್ತಾರೆ ಎಂಬ ಕಾರಣಕ್ಕೆ ಪ್ರಯತ್ನ ಮಾಡುವುದಿಲ್ಲ. ಹೈಕಮಾಂಡ್ನಲ್ಲಿ ಈಗ ಮಲ್ಲಿಕಾರ್ಜುನ ಖರ್ಗೆ ಇದ್ದಾರೆ. ಅವರು ರಾಜಕೀಯವಾಗಿ ನಮಗೆ ಸಾಕಷ್ಟು ಸಹಾಯ ಮಾಡಿದ್ದಾರೆ. ನನ್ನ ಕೆಲಸ ಅವರಿಗೆ ಗೊತ್ತಿದೆ. ನಾನು ಕಾಂಗ್ರೆಸ್ ನ ಎಲ್ಲ ನಾಯಕರಿಗೂ ಚಿರಪರಿಚಿತ. ನನ್ನ ಅನುಭವದ ಆಧಾರದ ಮೇಲೆ ನನಗೂ ಒಂದು ಅವಕಾಶ ಮಾಡಿಕೊಡಿ. ನಾನು ಎಂಪಿ ಆಗಿ ಕೆಲಸ ಮಾಡಿದ್ದೇನೆ. ಅದನ್ನು ಗಮನಿಸಿ ನೀಡಿ ಎಂದು ಕೇಳುತ್ತೇನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರವನ್ನು ಬೀಳಿಸುವುದರಲ್ಲಿ ತಮ್ಮ ಪಾತ್ರ ಹೆಚ್ಚಿದೆ. ಹೀಗಾಗಿ ಕಾಂಗ್ರೆಸ್ ನಿಮ್ಮನ್ನು ಒಪ್ಪುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲ ಪಾರ್ಟಿಗಳಲ್ಲಿ ಇರುವವರು ಶುದ್ಧವಂತರೇ ಎಂದು ಪ್ರಶ್ನಿಸಿ, ಸಿದ್ದರಾಮಯ್ಯ ಪರಿಶುದ್ಧ ಕಾಂಗ್ರೆಸ್ ನಾಯಕರೇ? ಯಡಿಯೂರಪ್ಪ ಶುದ್ಧ ಬಿಜೆಪಿನಾ ಎಲ್ಲರೂ ಪಕ್ಷಾಂತರಿಗಳೇ. ನಾವೆಲ್ಲ ಅಂದು ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರಿಗೆ ಅಧಿಕಾರ ಕೊಡಲು ಹೋಗಿದ್ದೇವು. ನಾವು ಅಧಿಕಾರ ಬೇಕೆಂದು ಹೋಗಿಲ್ಲ ಎಂದು ಹೇಳಿದ್ದಾರೆ.