ಬೆಂಗಳೂರು: ನಾನು ಚುನಾವಣೆಯಲ್ಲಿ ಸೋತಿದ್ದೇನೆ. ಆದರೆ, ಸತ್ತಿಲ್ಲ. ನನ್ನ ಹೋರಾಟ ನಿರಂತರವಾಗಿರುತ್ತದೆ. ನನಗೆ ಮತದಾರರು ಈ ಬಾರಿ ವಿಶ್ರಾಂತಿ ನೀಡಿದ್ದಾರೆ. ನಾನು ಅದನ್ನು ಗೌರವಯುತವಾಗಿ ಸ್ವೀಕರಿಸುತ್ತೇನೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತದಾರರಿಗೆ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಆಯೋಜಿಸಿದ್ದ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಜನ ಜಾತಿ, ಧರ್ಮ, ಭಾವನೆಗಳಿಗೆ ಮತ ನೀಡಿದ್ದಾರೆಯೇ ಹೊರತು ಬಿಜೆಪಿಗೆ ಹಾಕಿಲ್ಲ. ನಾನು ಯಾವತ್ತೂ ಹಿಂದೂ ಧರ್ಮೀಯ ಹಾಗೂ ಒಕ್ಕಲಿಗ ಎಂದು ಮತ ಕೇಳಿಲ್ಲ. ನಾನು ಮಾಡಿದ ಕೆಲಸಕ್ಕೆ ಕೂಲಿ ನೀಡಿ ಎಂದು ಮನವಿ ಮಾಡಿದ್ದೆ. ಆದರೂ ಸೋಲಿಸಿದ್ದಾರೆ. ಅಭಿವೃದ್ಧಿ ಮಾಡಿದರೂ ಆಗಿರುವ ಸೋಲನ್ನು ಸವಾಲಾಗಿ ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ.