ADVERTISEMENT
Sunday, January 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಪಕ್ಕದ ಮನೆಯವರು ಹೊಡೆದರೆ ಸುಮ್ಮನಿರುವಷ್ಟು ಒಳ್ಳೆಯವನಲ್ಲ ನಾನು ವಿವಾದಗಳಿಗೆ ಕಿಚ್ಚ ಸುದೀಪ್ ಖಡಕ್ ಪ್ರತಿಕ್ರಿಯೆ

I am not a good person to remain silent when my neighbor beats me, Kiccha Sudeep Khadak's response to the controversies

Shwetha by Shwetha
December 29, 2025
in ರಾಜ್ಯ, Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ಅವರು ಇತ್ತೀಚೆಗೆ ನಡೆದ ಬೆಳವಣಿಗೆಗಳು ಮತ್ತು ತಮ್ಮ ಮಾರ್ಕ್ ಚಿತ್ರದ ಕುರಿತಾದ ವಿವಾದಗಳಿಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ಸುದೀಪ್ ಅಭಿಮಾನಿಗಳ ವರ್ತನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ, ಸುದೀಪ್ ಅವರು ಪತ್ರಿಕಾಗೋಷ್ಠಿಯಲ್ಲಿ ಈ ಎಲ್ಲಾ ವಿಚಾರಗಳ ಬಗ್ಗೆ ನೇರವಾಗಿ ಮಾತನಾಡಿದ್ದಾರೆ.

ವಿಜಯಲಕ್ಷ್ಮಿ ಆರೋಪಕ್ಕೆ ಸುದೀಪ್ ಸ್ಪಷ್ಟನೆ

Related posts

Do you know if children are born on a new moon day, it is either auspicious or inauspicious?

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಶುಭವೂ ಅಥವಾ ಅಶುಭವೆಂದು ನಿಮಗೆ ಗೋತ್ತೇ..

January 24, 2026
ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

January 24, 2026

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು, ಸುದೀಪ್ ಅಭಿಮಾನಿಗಳೆಂದು ಹೇಳಿಕೊಳ್ಳುವ ಕೆಲವರು ಅವಹೇಳನಕಾರಿ ಸಂದೇಶ ಕಳುಹಿಸುತ್ತಿದ್ದಾರೆ ಮತ್ತು ಇವರು ಸುದೀಪ್ ಅವರ ಕ್ಲಾಸ್ ಫ್ಯಾನ್ಸ್ ಎಂದು ವ್ಯಂಗ್ಯವಾಗಿ ಪೋಸ್ಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸುದೀಪ್, ಇಡೀ ಚಿತ್ರರಂಗ ಚೆನ್ನಾಗಿಯೇ ಇದೆ. ನನ್ನ ಅಭಿಮಾನಿಗಳು ಅಥವಾ ಹುಡುಗರು ತಪ್ಪು ದಾರಿಯಲ್ಲಿದ್ದರೆ ಹೇಳಿ, ಅದನ್ನು ಸರಿಪಡಿಸುವ ಜವಾಬ್ದಾರಿ ನನ್ನದು. ಆದರೆ ಕ್ಲಾಸ್ ಫ್ಯಾನ್ಸ್ ಎಂದು ಅವರು ಯಾರನ್ನು ಉದ್ದೇಶಿಸಿ ಹೇಳಿದ್ದಾರೆ ಎನ್ನುವುದು ಸ್ಪಷ್ಟವಿಲ್ಲ. ಫೇಕ್ ಐಡಿಗಳಲ್ಲಿ ಬರುವ ಕಾಮೆಂಟ್‌ಗಳನ್ನು ಹಿಡಿದುಕೊಂಡು ಆರೋಪ ಮಾಡುವುದು ಸರಿಯಲ್ಲ. ಅವರು ಯಾರ ಬಗ್ಗೆ ಮಾತನಾಡುತ್ತಿದ್ದಾರೋ ಅವರ ಹೆಸರನ್ನು ನೇರವಾಗಿ ಹೇಳಿದರೆ ಉತ್ತರಿಸಲು ಸುಲಭವಾಗುತ್ತದೆ ಎಂದು ತಿರುಗೇಟು ನೀಡಿದರು.

ನಾನೇನು ಹೊಡೆಸಿಕೊಳ್ಳುವಷ್ಟು ಒಳ್ಳೆಯವನಲ್ಲ

ತಮ್ಮ ವ್ಯಕ್ತಿತ್ವ ಮತ್ತು ಚಿತ್ರರಂಗದಲ್ಲಿನ ತಮ್ಮ ನಿಲುವಿನ ಬಗ್ಗೆ ಮಾರ್ಮಿಕವಾಗಿ ಮಾತನಾಡಿದ ಕಿಚ್ಚ, ಪ್ರೀತಿಯಿಂದ ಹೆತ್ತ ತಾಯಿ ಕಪಾಳಕ್ಕೆ ಹೊಡೆದರೆ ಅದನ್ನು ಸಹಿಸಿಕೊಳ್ಳಬಹುದು, ಅದು ಪ್ರೀತಿ. ಆದರೆ ಪಕ್ಕದ ಮನೆಯವರು ಬಂದು ಹೊಡೆದರೂ ಸುಮ್ಮನೆ ಹೊಡೆಸಿಕೊಳ್ಳುವಷ್ಟು ಒಳ್ಳೆಯವನು ನಾನಲ್ಲ. ನಾನು ಚಿತ್ರರಂಗಕ್ಕೆ ಬಂದಿರುವುದು ಮನರಂಜನೆ ನೀಡಲು ಮತ್ತು ಕೆಲಸ ಮಾಡಲು, ಜಗಳ ಆಡಲು ಅಲ್ಲ. ಆದರೆ ಅನಗತ್ಯವಾಗಿ ನನ್ನ ತಂಟೆಗೆ ಬಂದರೆ ಸುಮ್ಮನಿರುವುದಿಲ್ಲ ಎಂದು ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.

ಮಗಳ ಮೇಲಿನ ಟ್ರೋಲ್‌ಗೆ ಪ್ರಬುದ್ಧ ಉತ್ತರ

ಮಾರ್ಕ್ ಚಿತ್ರವನ್ನು ವೀಕ್ಷಿಸಲು ಬಂದಿದ್ದ ಸುದೀಪ್ ಪುತ್ರಿ ಸಾನ್ವಿ ಅವರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಕೆಲವರು ಕೆಟ್ಟದಾಗಿ ಕಾಮೆಂಟ್ ಮಾಡುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಸುದೀಪ್ ಪ್ರಬುದ್ಧವಾಗಿ ಉತ್ತರಿಸಿದ್ದಾರೆ. ಆಕೆ ನನ್ನ ಮಗಳು, ನಾನೇ ಇಷ್ಟೆಲ್ಲಾ ಸಮಸ್ಯೆಗಳನ್ನು ಎದುರಿಸುತ್ತಿರುವಾಗ, ಅವಳು ಕೂಡ ಇವನ್ನೆಲ್ಲ ಎದುರಿಸುವುದನ್ನು ಕಲಿಯಬೇಕು. ಆಕೆ ದೊಡ್ಡ ಮಟ್ಟದಲ್ಲಿ ಬೆಳೆಯುತ್ತಾಳೆ. ಸಾಮಾಜಿಕ ಜಾಲತಾಣಗಳಲ್ಲಿ ಮುಖವಿಲ್ಲದೆ ಕಾಮೆಂಟ್ ಮಾಡುವ ಪ್ರತಿಯೊಬ್ಬರಿಗೂ ಉತ್ತರ ಕೊಡುತ್ತಾ ಕೂರಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಟ್ರೋಲಿಗರಿಗೆ ನಿರ್ಲಕ್ಷ್ಯದ ಉತ್ತರ ನೀಡಿದರು.

ಪೈರಸಿ ವಿರುದ್ಧ ಸಮರ ಮತ್ತು ಯುದ್ಧದ ಹೇಳಿಕೆ

ಮಾರ್ಕ್ ಸಿನಿಮಾ ಬಿಡುಗಡೆಯಾದ 24 ಗಂಟೆಯಲ್ಲೇ ಪೈರಸಿ ಹಾವಳಿ ಎದುರಿಸಿದೆ. ಈ ಬಗ್ಗೆ ಮಾತನಾಡಿದ ಸುದೀಪ್, ನಾನು ಹುಬ್ಬಳ್ಳಿಯ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಯುದ್ಧಕ್ಕೆ ರೆಡಿ ಎಂದು ಹೇಳಿದ್ದೆ. ಆಗ ಕೆಲವರು ಇದನ್ನು ಟೀಕಿಸಿದ್ದರು. ಈಗ ನೋಡಿ, ಸಿನಿಮಾ ಬಿಡುಗಡೆಯಾದ ಒಂದೇ ದಿನಕ್ಕೆ ಪೈರಸಿ ಕಾಪಿ ಹೊರಬಂದಿದೆ. ಕೇವಲ ಎರಡು ದಿನಗಳಲ್ಲಿ ನನಗೆ 4 ಸಾವಿರ ಪೈರಸಿ ಲಿಂಕ್‌ಗಳು ಬಂದಿವೆ ಮತ್ತು ಇಲ್ಲಿಯವರೆಗೆ ನಾವು 9 ಸಾವಿರ ಲಿಂಕ್‌ಗಳನ್ನು ಡಿಲೀಟ್ ಮಾಡಿಸಿದ್ದೇವೆ. ಇದಕ್ಕಾಗಿಯೇ ನಾನು ಅಂದು ನಮ್ಮ ಪಡೆ ಯುದ್ಧಕ್ಕೆ ಸಜ್ಜಾಗಿದೆ ಎಂದು ಹೇಳಿದ್ದೆ. ಪೈರಸಿ ಮಾಡುವವರ ವಿರುದ್ಧ ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಅಪ್ಪ ಅಮ್ಮ ಇಲ್ಲದ ಅನಾಥ ರಿವ್ಯೂಗಳು

ಮಾಧ್ಯಮಗಳ ಹೆಸರಿನಲ್ಲಿ ನಕಲಿ ಸುದ್ದಿಗಳು ಮತ್ತು ವಿಮರ್ಶೆಗಳು ಹರಿದಾಡುತ್ತಿರುವ ಬಗ್ಗೆಯೂ ಸುದೀಪ್ ವ್ಯಂಗ್ಯವಾಡಿದರು. ಕೇವಲ ಸಿನಿಮಾ ಮಾತ್ರವಲ್ಲ, ಪ್ರಖ್ಯಾತ ಮಾಧ್ಯಮಗಳ ಹೆಸರನ್ನೂ ಪೈರಸಿ ಮಾಡಲಾಗುತ್ತಿದೆ. ಒಂದೇ ಚಿತ್ರಕ್ಕೆ ಎರಡು ಬಗೆಯ ರಿವ್ಯೂಗಳು ಸಿಗುತ್ತಿವೆ. ಒಂದು ಅಧಿಕೃತವಾದರೆ, ಇನ್ನೊಂದು ಅಪ್ಪ-ಅಮ್ಮ ಇಲ್ಲದ ಅನಾಥ ರಿವ್ಯೂ ಎಂದು ಸೋಷಿಯಲ್ ಮೀಡಿಯಾದಲ್ಲಿನ ಫೇಕ್ ಸುದ್ದಿಗಳಿಗೆ ತಮ್ಮದೇ ಶೈಲಿಯಲ್ಲಿ ಚಾಟಿ ಬೀಸಿದರು.

ಮಾರ್ಕ್ ಚಿತ್ರದ ಯಶಸ್ಸಿನ ಜೊತೆಗೆ ಅನಗತ್ಯ ವಿವಾದಗಳು ಮತ್ತು ಪೈರಸಿ ಹಾವಳಿಯ ಬಗ್ಗೆ ಸುದೀಪ್ ಅವರು ತಮ್ಮ ನೇರ ನಡೆ ನುಡಿಯ ಮೂಲಕ ಉತ್ತರ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ ವಿಜಯ್ ಕಾರ್ತಿಕೇಯ, ನಿರ್ಮಾಪಕ ಜಾಕ್ ಮಂಜು, ವಿತರಕ ಕಾರ್ತಿಕ್ ಗೌಡ, ಸಾಹಸ ನಿರ್ದೇಶಕ ರವಿವರ್ಮ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಉಪಸ್ಥಿತರಿದ್ದರು.

ShareTweetSendShare
Join us on:

Related Posts

Do you know if children are born on a new moon day, it is either auspicious or inauspicious?

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಶುಭವೂ ಅಥವಾ ಅಶುಭವೆಂದು ನಿಮಗೆ ಗೋತ್ತೇ..

by admin
January 24, 2026
0

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಒಳ್ಳೆದಾ ಅಥವಾ ಕೆಟ್ಟದಾ.?? ಹಾಗಾದರೆ ಇದಕ್ಕೆ ಇರುವ ಪರಿಹಾರಗಳ ಮೂಲಕ ನಿಮ್ಮ ಜೀವನ ಬದಲಾಗಬಹುದು. ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್...

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

by Shwetha
January 24, 2026
0

ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಾಂವಿಧಾನಿಕ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ವಿಧಾನಮಂಡಲ ವಿಶೇಷ ಅಧಿವೇಶನದ ಎರಡನೇ ದಿನದ ಕಲಾಪದ ವೇಳೆ, ರಾಜ್ಯಪಾಲರ ಭಾಷಣ ವಿಷಯವೇ...

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

by Shwetha
January 24, 2026
0

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕೋಪಕ್ಕೆ ಕೆನಡಾ ಗುರಿಯಾಗಿದೆ. ಗಾಜಾ ಪ್ರದೇಶದಲ್ಲಿ ಶಾಂತಿ ಸ್ಥಾಪಿಸುವ ಉದ್ದೇಶದಿಂದ ರೂಪಿಸಲಾಗಿರುವ ಅಂತರರಾಷ್ಟ್ರೀಯ ಶಾಂತಿ ಮಂಡಳಿಗೆ ಸೇರಿಕೊಳ್ಳುವಂತೆ ಕೆನಡಾಕ್ಕೆ...

‘G RAM G’ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

‘G RAM G’ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

by Shwetha
January 24, 2026
0

‘VB–G RAM G’ ಕಾಯ್ದೆಯ ವಿರುದ್ಧ ನಿರ್ಣಯ ಅಂಗೀಕರಿಸಿದ ರಾಜ್ಯಗಳ ಪಟ್ಟಿಗೆ ಇದೀಗ ತಮಿಳುನಾಡು ಕೂಡ ಸೇರ್ಪಡೆಯಾಗಿದೆ. ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಈ ನಿರ್ಣಯವನ್ನು...

Lamp Characteristics: What should a god's lamp look like inside the house?

ದೀಪ ಲಕ್ಷಣ: ಮನೆಯೊಳಗೆ ದೇವರ ದೀಪ ಹೇಗಿರ ಬೇಕು?

by admin
January 24, 2026
0

ದೀಪ ಲಕ್ಷಣ: ಮನೆಯೊಳಗೆ ದೇವರ ದೀಪ ಹೇಗಿರ ಬೇಕು? ಇದೊಂದು ಮಹಾ ಜಿಜ್ಞಾಸೆಯ ವಿಷಯ ಆಗಿದೆ. ಒಬ್ಬೊಬ್ಬರು ಒಂದೊಂದು ತರಹ ಹೇಳಿ ತಲೆ ಕೆಡಿಸಿ ಬಿಡುತ್ತಾರೆ. ನಿಜವಾದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram