`ನನಗೆ ಬರೀ ಮೂರೂವರೆ ವರ್ಷ ಕೊಡಿ.. ಐ ಕ್ಯಾನ್ ಡೂ ವಂಡರ್ಸ್’
ಬೆಂಗಳೂರು : ನನಗೆ ಬರೀ ಮೂರೂವರೆ ವರ್ಷ ಕೊಡಿ.. ಐ ಕ್ಯಾನ್ ಡೂ ವಂಡರ್ಸ್ ಅಂತಾ ಎಂಎಲ್ ಸಿ ಹೆಚ್ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.
ಧರ್ಮೇಗೌಡರಿಂದ ಖಾಲಿಯಾದ ವಿಧಾನಪರಿಷತ್ ಉಪಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ವಿಶ್ವನಾಥ್, ಈ ಬಗ್ಗೆ ನಾನು ದೆಹಲಿ ವರಿಷ್ಠರು, ರಾಜ್ಯದ ವರಿಷ್ಠರು ಮತ್ತು ಸಿಎಂ ಗಮನಕ್ಕೆ ತಂದಿದ್ದೇನೆ.
ಪರಿಷತ್ ಗೆ ನಾಮ ನಿರ್ದೇಶಿತವಾದ ನನಗೆ ಇನ್ನೂ ಐದೂವರೆ ವರ್ಷ ಅವಧಿ ಇದೆ. ನನಗೆ ಸುಪ್ರೀಂ ಕೋರ್ಟ್ ಶಾಪ ವಿಮೋಚನೆ ಆಗಬೇಕಾದರೇ ನಾನು ಚುನಾವಣೆ ಮೂಲಕವೇ ಬರಬೇಕು. ಹೀಗಾಗಿ ವಿಧಾನಸಭೆಯಿಂದ ವಿಧಾನಪರಿಷತ್ ಗೆ ಬಂದರೆ ಶಾಪ ವಿಮೋಚನೆ ಆಗುತ್ತದೆ.
ಇನ್ನು ಸರ್ಕಾರದಲ್ಲಿ ನಾನು ಈಗಾಗಲೇ ಸಾಕಷ್ಟು ಜವಾಬ್ದಾರಿ ನಿರ್ವಹಿಸಿದ್ದೇನೆ, ನಾನು ಮಂತ್ರಿಯಾಗಿದ್ದಾಗ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್, ಶೌಚಾಲಯ, ಸೌಲಭ್ಯ ಕಲ್ಪಿಸಿದ್ದೆ.
ಈಗ ಈ ಸಮಸ್ಯೆಗಳ ಬಗ್ಗೆ ಪತ್ರಿಕೆಗಳಲ್ಲಿ ನೋಡಿದ್ದೇನೆ. ಹಾಗಾಗಿ ನನಗೆ ಒಂದು ಜವಾಬ್ದಾರಿ ಕೊಡಿ, ಶಾಪ ವಿಮೋಚನೆ ಮಾಡಿ ಎಂದು ಸಿಎಂ ಬಳಿ ಮನವಿ ಮಾಡಿಕೊಂಡರು.
ನನಗೆ ಸುಪ್ರೀಂ ಕೋರ್ಟ್ ಶಾಪ ವಿಮೋಚನೆ ಮಾಡಿದ್ರೆ, ಬರೀ ಮೂರೂವರೆ ವರ್ಷ ಸಾಕು. ಐ ಕ್ಯಾನ್ ಡೂ ವಂಡರ್ಸ್ ಎಂದು ಹೆಚ್ ವಿಶ್ವನಾಥ್ ಹೇಳಿದ್ದಾರೆ.










