ಬಳ್ಳಾರಿ : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಇದೇ ವಿಚಾರವಾಗಿ ನಾಳಿ ಸಿಎಂ ದೆಹಲಿ ವರಿಷ್ಠರ ಜೊತೆ ಮಾತನಾಡಲಿದ್ದಾರೆ. ಈ ಬಗ್ಗೆ ಶಾಸಕ ಸೋಮಶೇಖರ್ ರೆಡ್ಡಿ ಪ್ರತಿಕ್ರಿಯಿಸಿದ್ದು, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದಿದ್ದಾರೆ.
ಇಂದು ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಹಿನ್ನೆಲೆ ಬಿಜೆಪಿ ವತಿಯಿಂದ ಬಳ್ಳಾರಿಯಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು.
ಶಾಸಕ ಸೋಮಶೇಖರ ರೆಡ್ಡಿ ಸೇರಿದಂತೆ ನೂರಾರು ಜನ ಬಿಜೆಪಿ ಕಾರ್ಯಕರ್ತರು ರಕ್ತದಾನ ಮಾಡಿ ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡುತ್ತ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಸೋಮಶೇಖರ್, ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ, ಆಂಜನೇಯ ಸ್ವಾಮಿ ಅನುಗ್ರಹ ನೀಡಿದಾಗ ಆಗುತ್ತೇನೆ.
ನಾನು ಮಂತ್ರಿ ಸ್ಥಾನ ಕೊಡಿ ಎಂದು ಕೇಳಲ್ಲ.
ದೇವರ ಅನುಗ್ರಹ ಇದ್ದರೆ ಮಂತ್ರಿ ಆಗುವೆ.
ಪಕ್ಷವೇ ನನಗೆ ಮಂತ್ರಿ ಸ್ಥಾನ ಕೊಟ್ಟರೆ ಆಗುತ್ತೇನೆ.
ಆನಂದ್ ಸಿಂಗ್ ಅವರು ಸಹೋದರನ ರೀತಿ ಇದ್ದಾರೆ. ಹೀಗಾಗಿ ನನಗೆ ಸಚಿವ ಸ್ಥಾನದ ಅಗತ್ಯವಿಲ್ಲ ಎಂದಿದ್ದಾರೆ.