ಕೊಲ್ಕತ್ತಾ : ನಾಳೆ ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ಮೊಂಬತ್ತಿ, ಹಣತೆ ಅಥವಾ ಮೊಬೈಲ್ ಟಾರ್ಚ್ ಬೆಳಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಮತಾ ಬ್ಯಾನರ್ಜಿ, ಅದು ಅವರವರ ವೈಕ್ತಿಕ ವಿಚಾರ. ನನಗೆ ನಾಳೆ ರಾತ್ರಿ 9 ಗಂಟೆಗೆ ನಿದ್ರೆ ಮಾಡಬೇಕೆನಿಸಿದರೆ ಮಲಗುತ್ತೇನೆ ಎಂದಿದ್ದಾರೆ.
ಕೊಲ್ಕತ್ತಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೀದಿ, “ದೀಪ ಹಚ್ಚುವುದು ಅಥವಾ ಮಲಗುವುದು ಜನರ ವೈಯಕ್ತಿಕ ವಿಚಾರ. ನನಗೆ ನಾಳೆ ಮಲಗಬೇಕು ಎನಿಸಿದರೆ ನಾನು ದೀಪ ಹಚ್ಚುವುದಿಲ್ಲ. ನಿಮಗೆ ಅವರು ಹೇಳಿದಂತೆ ದೀಪ ಹಚ್ಚಬೇಕೆನಿಸಿದರೆ ಹಚ್ಚಿ, ಆದರೆ, ಆ ಬಗ್ಗೆ ನನ್ನನ್ನು ಕೇಳಬೇಡಿ ಎಂದು ಹೇಳಿದ್ದಾರೆ.
ನಿನ್ನೆ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ವಿಡಿಯೋ ಸಂದೇಶ ನೀಡಿದ್ದು, ಕೊರೊನಾ ವೈರಸ್ ಜನ ಸಂಕಷ್ಟ ಅನುಭವಿಸುತ್ತಿರುವ ಸಮಯದಲ್ಲಿ ದೇಶದ ಜನರೆಲ್ಲರೂ ತಮ್ಮ ಒಗ್ಗಟ್ಟು ಪ್ರದರ್ಶಿಸುವ ಸಲುವಾಗಿ ಏ. 5ರಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ಮೊಂಬತ್ತಿ, ಹಣತೆ ಅಥವಾ ಮೊಬೈಲ್ ಟಾರ್ಚ್ ಬೆಳಗಬೇಕು ಎಂದು ಕರೆ ನೀಡಿದ್ದಾರೆ.








