ಬೆಂಗಳೂರು: ನನ್ನ ಪ್ರಕಾರ ಜೆಡಿಎಸ್ ಒಂದು ಪಕ್ಷವೇ ಅಲ್ಲ ಎಂದು ಜೆಡಿಎಸ್ ಪಕ್ಷದ ವಿರುದ್ಧ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಉಪಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಪಕ್ಷದ ನಾಯಕರು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿದರು.
ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಮೊನ್ನೆ ಯಾಕೋ ಕುಮಾರಸ್ವಾಮಿ ಶಿರಾಗೆ ಬಂದು ಅಳ್ತಾ ಇದ್ನಪ್ಪ. ವಿಷ ಕೊಡಿ ಮತ್ತೊಂದು ಕೊಡಿ ಅಂತಿದ್ದ.
ಇದೇನು ಹೊಸತಲ್ಲ ದೇವೇಗೌಡರ ಕಾಲದಿಂದಲೂ ಹೀಗೆ ನಡೆದುಕೊಂಡು ಬಂದಿದೆ. ಕುಮಾರಸ್ವಾಮಿ ಅದನ್ನು ಮುಂದುವರಿಸಿದ್ದಾರೆ ಅಷ್ಟೇ.
ನನ್ನ ಪ್ರಕಾರ ಜೆಡಿಎಸ್ ಒಂದು ಪಕ್ಷವೇ ಅಲ್ಲ. ರಾಜಕೀಯದಲ್ಲಿ ಜನ ಸೇವೆ ಮಾಡಬೇಕು.
ಅದನ್ನು ಬಿಟ್ಟು ವಿಷ ಕೊಡಿ ಎಂಬುದು ರಾಜಕಾರಣನಾ? ಜನರೇ ಆಶೀರ್ವಾದ ಮಾಡಬೇಕು.
ನಾವೇ ಕೇಳಿಕೊಳ್ಳಬಾರದು ಎಂದು ಹೆಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆ ಸಿದ್ದರಾಮಯ್ಯ ಟಾಂಗ್ ನೀಡಿದರು.
ಇದನ್ನೂ ಓದಿ : ಆರ್ ಆರ್ ನಗರ ಬೈ ಎಲೆಕ್ಷನ್ ; ಕುಸುಮಾ ಅವರಿಗೆ ‘ಕೈ’ ಟಿಕೆಟ್ ಪಕ್ಕಾ
ಮೊನ್ನೆ ಶಿರಾಗೆ ಭೇಟಿ ನೀಡಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಶಿರಾ ಜನ ನನಗೆ ವಿಷ ಕೊಡುತ್ತೀರೋ, ಹಾಲು ಕೊಡುತ್ತೀರೋ.
ಇದನ್ನು ಶಿರಾ ಕ್ಷೇತ್ರದ ಜನರಿಗೆ ಬಿಡುತ್ತೇನೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.