ಹಾಸನ: ಪ್ರಜ್ವಲ್, ನಾನು ಹಾಸನ ಜನರ ಋಣ ತೀರಿಸುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ (Suraj Revanna) ಹೇಳಿದ್ದಾರೆ.
ಹುಟ್ಟು ಹಬ್ಬದ ಅಂಗವಾಗಿ ಚನ್ನರಾಯಪಟ್ಟಣದಲ್ಲಿ ಬುಧವಾರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿರೋಧಿಗಳು ನಮ್ಮ ಕಾರ್ಯಕರ್ತರಿಗೆ ತೊಂದರೆ ಕೊಡುತ್ತಿದ್ದಾರೆ. ಯಾವುದೂ ಶಾಶ್ವತವಲ್ಲ. ಯಾವ ಸರ್ಕಾರವೂ ಶಾಶ್ವತ ಅಲ್ಲ. ನಾವು ಮಾಡುವ ಒಳ್ಳೆಯ ಕೆಲಸ ಮಾತ್ರ ಈ ಭೂಮಿ ಮೇಲೆ ಉಳಿಯುತ್ತದೆ. ಈ ದ್ವೇಷದ ರಾಜಕಾರಣ ಉಳಿಯಲ್ಲ ಎಂದಿದ್ದಾರೆ.
ಸರ್ಕಾರ ಬಂದು ಎಷ್ಟು ತಿಂಗಳು ಆಯ್ತು, ಯಾವ ರೈತರಿಗೆ ಒಳ್ಳೆಯದಾಗಿದೆ ಹೇಳಿ? ಕುತಂತ್ರಿಗಳ, ವಿರೋಧಿಗಳ, ದ್ವೇಷದ ರಾಜಕಾರಣದ ಕತ್ತಲು ಆವರಿಸಿಕೊಂಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ನಿನ್ನೆ ಮೊನ್ನೆ ಪೆನ್ಡ್ರೈವ್ (Pendrive) ಹಂಚಿ ನಾನು ಎಂಎಲ್ಸಿ ಆಗಿಲ್ಲ. ನಿಮ್ಮ ತಾತನ ತರ ಕುತಂತ್ರ ಮಾಡಿ ಎಂಎಲ್ಸಿ ಆಗಿದ್ದಲ್ಲ. ದೇವೇಗೌಡರು, ರೇವಣ್ಣನ ಕುಟುಂಬ ಮುಗಿಸುತ್ತಾರಂತೆ. ಇವತ್ತೇನು ಅಚಾನಕ್ಕಾಗಿ ಸಂಸದರಾಗಿದ್ದಾರೆಯೋ ಅವರ ತಾತ, ನಮ್ಮ ಅಜ್ಜಿ, ತಾಯಿ ಮೇಲೆ ಆಸಿಡ್ ಎರಚಿಸಿದ್ದನ್ನ ಯಾರೂ ಮರೆಯಬಾರದು. ಇದು ಇಲ್ಲಿರುವ ಹಿರಿಯರಿಗೆ ಮಾತ್ರ ನೆನಪಿರುತ್ತದೆ. ಇದೇ ರೀತಿ ಕುತಂತ್ರ, ಒಳಸಂಚು ಮಾಡಿ ನಮ್ಮನ್ನು ಹತ್ತಿಕ್ಕಲು ಯತ್ನಿಸಿದರೆ ನಾವು ಸುಮ್ಮನಿರುವುದಿಲ್ಲ ಎಂದಿದ್ದಾರೆ.








