ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಕಾರು ಪಲ್ಟಿ
ಧಾರವಾಡ: ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಕಾರು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಧಾರವಾಡ ತಾಲೂಕಿನ ಯರಿಕೊಪ್ಪ ಬಳಿಯ ರಾಷ್ಟ್ರಿಯ ಹೆದ್ದಾರಿ 4 ರಲ್ಲಿ ಪಲ್ಟಿಯಾಗಿದೆ. ಕಾರಿನಲ್ಲಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ, ಪತ್ನಿ ಶ್ವೇತಾ ಹಾಗೂ ಮಕ್ಕಳಾದ ತನ್ವಿ, ವಿಹಾನ್ ಮತ್ತು ಚಾಲಕ ಪ್ರವೀಣ ಕುಮಾರ ಸಂಚರಿಸುತ್ತಿದ್ದರು.
ಸೋಮವಾರ ವಿಜಯಪುರ ಜಿಲ್ಲಾಧಿಕಾರಿಯಾಗಿ ವಿಜಯ ಮಹಾಂತೇಶ ದಾನಮ್ಮನವರ ವರ್ಗಾವಣೆಗೊಂಡಿದ್ದರು. ಹೀಗಾಗಿ ಇಂದು (ಮಂಗಳವಾರ) ಅಧಿಕಾರ ಸ್ವೀಕರಿಸಲು ಹೊರಟಿದ್ದ ವಿಜಯ ಮಹಾಂತೇಶ ದಾನಮ್ಮನವರ ಹೊರಟಿದ್ದರು. ದಾರಿ ಮಧ್ಯೆ, ಧಾರವಾಡ ತಾಲೂಕಿನ ಯರಿಕೊಪ್ಪ ಬಳಿಯ ರಾಷ್ಟ್ರಿಯ ಹೆದ್ದಾರಿ 4 ರಲ್ಲಿ ಬೆಳಗಿನ ಜಾವ 5:30ಕ್ಕೆ ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ ಸಣ್ಣ-ಪುಟ್ಟ ಗಾಯಾಳುಗಳಾಗಿದ್ದು, ಧಾರವಾಡದ ಎಸ್ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಾವಣಗೆರೆಯಲ್ಲಿ ಜಿ.ಪಂ. ಸಿಇಒಯಾಗಿ ದಾನಮ್ಮನವರ ಕಾರ್ಯನಿರ್ವಹಿಸುತ್ತಿದ್ದರು. ನಿನ್ನೆ ಸೋಮವಾರ ವಿಜಯಪುರ ಡಿಸಿಯಾಗಿ ವರ್ಗಾವಣೆಗೊಂಡಿದ್ದರು. ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.