ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ICC ODI World cup 2023 – ತೆರೆದಂತಿದೆ ಟೀಮ್ ಇಂಡಿಯಾದ ಭಾಗ್ಯದ ಬಾಗಿಲು..!

admin by admin
August 7, 2023
in Sports, ಕ್ರಿಕೆಟ್, ಕ್ರೀಡೆ
rohith sharma team india
Share on FacebookShare on TwitterShare on WhatsappShare on Telegram

ICC ODI World cup 2023 – ತೆರೆದಂತಿದೆ ಟೀಮ್ ಇಂಡಿಯಾದ ಭಾಗ್ಯದ ಬಾಗಿಲು..!

ಏಕದಿನ ವಿಶ್ವಕಪ್ ಗೆಲ್ಲುವ ಟೀಮ್ ಇಂಡಿಯಾದ ಭಾಗ್ಯದ ಬಾಗಿಲು ತೆರೆದಂತೆ ಭಾಸವಾಗುತ್ತಿದೆಯಾ…? ಹೌದು, 12 ವರ್ಷಗಳ ಬಳಿಕ ಭಾರತದಲ್ಲಿ ಏಕದಿನ ವಿಶ್ವಕಪ್ ಟೂರ್ನಿ ನಡೆಯಲಿದೆ. ಅಕ್ಟೋಬರ್ 5ರಿಂದ ಆರಂಭವಾಗಲಿರೋ ಏಕದಿನ ವಿಶ್ವಕಪ್ ಟೂರ್ನಿಗೆ ತಂಡಗಳು ಸನ್ನದ್ದವಾಗುತ್ತಿದೆ.
ಸದ್ಯ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ಪ್ರವಾಸ ಮುಗಿಸಿ ಏಷ್ಯಾಕಪ್ ಟೂರ್ನಿಗೆ ರೆಡಿಯಾಗಬೇಕಿದೆ. ಆ ಬಳಿಕ ವಿಶ್ವಕಪ್ ಆಶ್ವಮೇಧಕ್ಕೆ ಟೀಮ್ ಇಂಡಿಯಾ ತಯಾರಿ ನಡೆಸಲಿದೆ. ಹಾಗೇ ನೋಡಿದ್ರೆ ಈ ಬಾರಿಯ ವಿಶ್ವಕಪ್‍ಗೆ ಟೀಮ್ ಇಂಡಿಯಾದ ಪೂರ್ವ ತಯಾರಿ ಅಷ್ಟೊಂದು ಸೀರಿಯಸ್ ಆಗಿ ಕಾಣತ್ತಿಲ್ಲ. ತಂಡದ ಕಾಂಬಿನೇಷನ್ ಬಗ್ಗೆ ಇನ್ನೂ ಕೂಡ ಗೊಂದಲಗಳಿವೆ. ಆದ್ರೂ ಟೀಮ್ ಇಂಡಿಯಾ ತವರಿನ ಲಾಭ ಪಡೆದು ಮೂರನೇ ಬಾರಿ ಏಕದಿನ ವಿಶ್ವಕಪ್ ಗೆಲ್ಲುವ ಕನಸು ಕಾಣುತ್ತಿದೆ.
ಇದಕ್ಕೆ ಪೂರಕವಾಗಿ ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಈ ಬಾರಿ ಟ್ರೋಫಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಮೂರನೇ ವಿಶ್ವಕಪ್ ಆಡ್ತಿರೋ ರೋಹಿತ್ ಶರ್ಮಾಗೆ ಇದು ಕೊನೆಯ ವಿಶ್ವಕಪ್ ಟೂರ್ನಿಯಾಗಲಿದೆ. ಹಾಗೇ 2011ರ ವಿಶ್ವಕಪ್ ಗೆದ್ದ ತಂಡದಲ್ಲಿದ್ದ ವಿರಾಟ್ ಕೊಹ್ಲಿಗೂ ಕಡೆಯ ವಿಶ್ವಕಪ್. ಹೀಗಾಗಿ ಈ ಬಾರಿ ಟ್ರೋಫಿ ಗೆಲ್ಲಲೇಬೇಕು ಎಂಬ ಹಠ ಟೀಮ್ ಇಂಡಿಯಾದ್ದು. ಅಷ್ಟೇ ಅಲ್ಲ, ಕೋಟ್ಯಂತರ ಭಾರತೀಯರ ಹೃದಯಬಡಿತವೂ ಅದೇ ಆಗಿದೆ. ಅದು, ಟೀಮ್ ಇಂಡಿಯಾ ವಿಶ್ವಕಪ್ ಗೆಲ್ಲಬೇಕು ಎಂಬುದು.
ಅಂದ ಹಾಗೇ, ಕ್ಯಾಪ್ಟನ್ ರೋಹಿತ್ ಶರ್ಮಾ ಈ ಹಿಂದಿನ ವಿಶ್ವಕಪ್ ಟೂರ್ನಿಗಳ ಸಾಧನೆಗಳನ್ನು ನೆನಪು ಮಾಡಿಕೊಂಡಿದ್ದಾರೆ. 2003ರಲ್ಲಿ ಟೀಮ್ ಇಂಡಿಯಾ ಅದ್ಭುತ ಪ್ರದರ್ಶನ ನೀಡಿದ ಫೈನಲ್‍ನಲ್ಲಿ ಎಡವಿತ್ತು. 2007ರಲ್ಲಿ ಲೀಗ್ ಹಂತದಲ್ಲೇ ನಿರಾಸೆ ಅನುಭವಿಸಿತ್ತು. ಆದ್ರೆ 2011ರಲ್ಲಿ ಟೀಮ್ ಇಂಡಿಯಾ ವಿಶ್ವ ಚಾಂಪಿಯನ್‍ಪಟ್ಟಕ್ಕೇರಿತ್ತು. ಆದ್ರೆ ಆ ಪಂದ್ಯವನ್ನು ನಾನು ಮೈದಾನಕ್ಕೆ ಹೋಗಿ ನೋಡಲಿಲ್ಲ. ಮುಖ್ಯವಾಗಿ ನಾನು ತಂಡದ ಭಾಗವಾಗಿರಲಿಲ್ಲ. ಹೀಗಾಗಿ ಸ್ವಲ್ಪ ನಿರಾಸೆಯಾಗಿತ್ತು. ಆದ್ರೂ ಮನೆಯಲ್ಲೇ ಕೂತು ಪಂದ್ಯವನ್ನು ವೀಕ್ಷಿಸಿದ್ದೆ. ಗೆಲುವಿನ ಸಂಭ್ರಮವನ್ನು ಆನಂದಿಸಿದ್ದೆ ಎಂದು ರೋಹಿತ್ ಶರ್ಮಾ ಹೇಳಿಕೊಂಡಿದ್ದಾರೆ.
ಇನ್ನು 2015ರಲ್ಲಿ ಮತ್ತು 2019ರಲ್ಲಿ ಟೀಮ್ ಇಂಡಿಯಾದ ಭಾಗವಾಗಿದ್ದೆ. ಎರಡು ಟೂರ್ನಿಗಳಲ್ಲೂ ಸೆಮಿಫೈನಲ್‍ನಲ್ಲಿ ಸೋಲು ಅನುಭವಿಸಬೇಕಾಯ್ತು. ಆದ್ರೆ ಈ ಬಾರಿ ಮತ್ತೆ ತವರಿನಲ್ಲಿ ಏಕದಿನ ವಿಶ್ವಕಪ್ ಟೂರ್ನಿ ನಡೆಯುತ್ತಿದೆ. ತವರು ಅಭಿಮಾನಿಗಳ ಬೆಂಬಲದೊಂದಿಗೆ ಅವರ ನಿರೀಕ್ಷೆಗೆ ತಕ್ಕಂತೆ ಆಡಿ ಟ್ರೋಫಿ ಗೆಲ್ಲಬೇಕು ಎಂಬುದು ಅವರ ವಿಶ್ವಾಸದ ನುಡಿ.
ಇನ್ನು ರೋಹಿತ್ ಶರ್ಮಾ 2019ರ ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ರು. ಟೂರ್ನಿಯಲ್ಲಿ ಐದು ಶತಕಗಳನ್ನು ಸಿಡಿಸಿ ತಂಡದ ಗೆಲುವಿನಲ್ಲೂ ಪ್ರಮುಖ ಪಾತ್ರವಹಿಸಿದ್ದರು. ಅದೇ ರೀತಿ ಈ ಬಾರಿಯೂ ರೋಹಿತ್ ಶರ್ಮಾ ಅದ್ಭುತ ಪ್ರದರ್ಶನ ನೀಡ್ತಾರೆ ಅನ್ನೋ ನಂಬಿಕೆ ಕ್ರಿಕೆಟ್ ಅಭಿಮಾನಿಗಳದ್ದು.
ನನಗೆ ಗೊತ್ತು.. ತವರು ಅಭಿಮಾನಿಗಳು ಭಾರೀ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಆಡುವ ಪ್ರತಿ ಮೈದಾನದಲ್ಲೂ ಟೀಮ್ ಇಂಡಿಯಾವನ್ನು ಬೆಂಬಲಿಸೋ ಅಭಿಮಾನಿಗಳಿದ್ದಾರೆ. ಅದಕ್ಕೆ ತಕ್ಕಂತೆ ನಾವು ರೆಡಿಯಾಗಬೇಕು. ವಿಶ್ವಕಪ್ ಟೂರ್ನಿಯ ಪಂದ್ಯಗಳು ಟೆಸ್ಟ್ ಪಂದ್ಯಗಳಂತೆ ಅಲ್ಲ. ಇಲ್ಲಿ ಪ್ರತಿ ದಿನ ಹೊಸತು.. ಹೊಸ ಸವಾಲು. ಸವಾಲಿಗೆ ತಕ್ಕಂತೆ ನಾವು ಆಡಬೇಕು. ಆಗ ಮಾತ್ರ ಯಶ ಸಾಧಿಸಲು ಸಾಧ್ಯ ಅಂತ ರೋಹಿತ್ ಶರ್ಮಾ ಹೇಳಿದ್ದಾರೆ.
ಒಟ್ಟಿನಲ್ಲಿ ಟೀಮ್ ಇಂಡಿಯಾ ಸೈಲೆಂಟ್ ಆಗಿಯೇ ವಿಶ್ವಕಪ್ ಸಮರಕ್ಕೆ ಸನ್ನದ್ದವಾಗುತ್ತಿದೆ. 12 ವರ್ಷಗಳ ನಂತರ ಟೀಮ್ ಇಂಡಿಯಾ ವಿಶ್ವ ಚಾಂಪಿಯನ್ ಪಟ್ಟಕ್ಕೇರಲಿ ಎಂಬುದು ಕೋಟಿ ಕೋಟಿ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಹಾರೈಕೆ.

Related posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

August 4, 2026
sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026
Tags: #Saaksha TVCricketICC ODI World cup 2023Rahul Dravidrohith sharmaSachin TendulkarSportsteam indiavirat kohli
ShareTweetSendShare
Join us on:

Related Posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

by admin
August 3, 2026
0

  ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್  ಬೌಲರ್ ಮತ್ತೆ ಗಾಯದಿಂದ ಬಳುತ್ತಿದ್ದಾರೆ. ಮೊಣಕಾಲಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ವೇಗಿ ಮುಂಬರುವ ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ....

glasgow-commonwealth-games-2026-india-medals-nita-ambani-congratulates

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಅಮೋಘ ಸಾಧನೆಗೆ ನೀತಾ ಅಂಬಾನಿ ಅಭಿನಂದನೆ

by admin
August 3, 2026
0

  ಮುಂಬೈ, ಆಗಸ್ಟ್ 03, 2026: ಗ್ಲಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು 13 ಚಿನ್ನ, 17 ಬೆಳ್ಳಿ ಹಾಗೂ 9 ಕಂಚಿನ ಪದಕಗಳ ಸಹಿತ ಒಟ್ಟು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram