ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಸ್ಫೋಟದ ಹಿಂದೆ ಐಸಿಸ್ ಉಗ್ರರ ಕೈವಾಡ ಇದೆಯಾ ಎಂಬ ಶಂಕೆ ವ್ಯಕ್ತವಾಗಿದೆ.
ಬಾಂಬ್ ಬ್ಲಾಸ್ಟ್ ಆದ ಸ್ಥಳದಲ್ಲಿ ಸಿಕ್ಕ ವಸ್ತುಗಳಿಂದಾಗಿಯೇ ಈ ಅನುಮಾನ ಮೂಡಿದೆ. ಮಂಗಳೂರು ಕುಕ್ಕರ್ ಬ್ಲಾಸ್ಟ್, ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಮಾಡಿದ್ದು ಇದೇ ಐಸಿಸ್ ಉಗ್ರರು ಎಂಬುವುದು ಬಯಲಾಗಿತ್ತು. ಚರ್ಚ್ ಸ್ಟ್ರೀಟ್ ನಲ್ಲಿ ಈ ಹಿಂದೆ ನಡೆದಿದ್ದ ಸ್ಪೋಟದ ಮಾದರಿಯಲ್ಲಿಯೇ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಸಂಭವಿಸಿದೆ. ಸ್ಪೋಟದಲ್ಲಿ ಬಳಕೆಯಾಗಿರುವ ಡಿಟೋನೇಟರ್, ಬ್ಯಾಟರಿ ಸೇರಿ ಹಲವು ವಸ್ತುಗಳು ಕುಕ್ಕರ್ ಬ್ಲಾಸ್ಟ್ ನಂತೆಯೇ ಪತ್ತೆಯಾಗಿದೆ ಎನ್ನಲಾಗಿದೆ.
ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಟಿಫನ್ಸ್ ಬಾಕ್ಸ್ ಬದಲಿಗೆ ಪ್ಲಾಸ್ಟಿಕ್ ಕವರ್ ಬಳಕೆ ಮಾಡಲಾಗಿದೆ. ಪ್ಲಾಸ್ಟಿಕ್ ಕವರ್ ನಲ್ಲಿ ಶಂಕಿತ ಎರಡು ಕಂಟೇನರ್ ಮಾಡಿದ್ದ. ಕಂಟೇನರ್ ಬ್ಯಾಗ್ ನ ಒಳಗೆಯೇ ಇತ್ತು. ಒಂದಾದ ಬಳಿಕ ಮತ್ತೊಂದು ಸ್ಫೋಟವಾಗುವಂತೆ ಟೈಂ ಸೆಟ್ಟಿಂಗ್ ಮಾಡಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ.