ಲಾಕ್ಡೌನ್ ಇನ್ನಷ್ಟು ದಿನ ವಿಸ್ತರಿಸಿದರೆ ಒಳ್ಳೆಯದು : ಮುರುಗೇಶ ನಿರಾಣಿ
ಕಲಬುರ್ಗಿ : ರಾಜ್ಯದಲ್ಲಿ ಇನ್ನಷ್ಟು ದಿನ ಲಾಕ್ ಡೌನ್ ವಿಸ್ತರಣೆ ಮಾಡಿದ್ರೆ ಒಳ್ಳೆಯದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ದಿನಗಳ ಅಂಕಿಅಂಶಗಳ ಪ್ರಕಾರ ಸೊಂಕು ಇಳಿಮುಖವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ವೈರಸ್ ವೇಗವಾಗಿ ಹರಡುತ್ತಿದೆ. ಈ ಬಗ್ಗೆ ಗ್ರಾ ಪಂ ಪಿಡಿಓ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ರಾಜ್ಯದಲ್ಲಿ ಲಾಕ್ಡೌನ್ ವಿಸ್ತರಣೆ ಮಾಡಿದ್ರೆ ಒಳ್ಳೆಯದು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗಮನ ಹರಿಸಬೇಕೆಂಬ ಒಲವು ವ್ಯಕ್ತಪಡಿಸಿದ್ದೇವೆ.
ತಜ್ಞರು, ಹಿರಿಯರು ಸಹ ಲಾಕ್ಡೌನ್ ವಿಸ್ತರಣೆ ಮಾಡಿ ಅಂದಿದ್ದಾರೆ. ವೈಯುಕ್ತಿಕವಾಗಿ ಹತ್ತು ದಿನ ಲಾಕ್ಡೌನ್ ವಿಸ್ತರಣೆ ಮಾಡಬೇಕು ಎಂದು ಹೇಳಿದರು.
ಇನ್ನು ಶ್ರಮೀಕ ವರ್ಗದವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಬಗ್ಗೆ ಸಿಎಂ ನಿರ್ಧಾರ ಮಾಡುತ್ತಾರೆ. ಶಹಬಾದ್ ಇಎಸ್ಐ ಆಸ್ಪತ್ರೆ ಕಟ್ಟಡ ಕೋವಿಡ್ ಕೆರ್ ಸೆಂಟರ್ ಮಾಡಲಾಗುತ್ತಿದೆ. ನಮಗೆ ಹಣದ ಕೊರತೆಯಿಲ್ಲ, ಪರಿಶೀಲನೆ ಮಾಡಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಇನ್ನು ಸಂಸದ ಡಾ.ಉಮೇಶ ಜಾಧವ ಮಾತನಾಡಿ, ಕಪ್ಪು ಶಿಲೀಂಧ್ರ ಕಾಯಿಲೆ ಮಧುಮೇಹ ಇದ್ದವರಿಗೆ ಬರುತ್ತದೆ. ಅದಕ್ಕೂ ಮುಂಬೈನಿಂದ ಔಷಧಿ ತರಿಸಿಕೊಡಲಾಗಿದೆ. ಯಾರೂ ಗಾಬರಿಯಾಗುವ ಅಗತ್ಯವಿಲ್ಲ ಎಂದು ಹೇಳಿದರು.