ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್ ವಿರುದ್ಧ ಗುಡುಗಿದ್ದಾರೆ.
ಇಂಡಿ ಒಕ್ಕೂಟ ಸಭೆಯಲ್ಲಿ ಮಾತನಾಡಿದ ಅವರು, ಆರೆಸ್ಸೆಸ್ ವಿಷ ಇದ್ದಂತೆ. ಅದರ ಟೇಸ್ಟ್ ನೋಡೋಕೆ ಹೋದರೆ, ಸಾಯುತ್ತೀರಿ ಎಂದು ಹೇಳಿದ್ದಾರೆ. ಆರೆಸ್ಸೆಸ್ ದೇಶಕ್ಕಾ ಏನು ಮಾಡಿದೆ? ಅದು ಚುನಾವಣೆ ಸಂದರ್ಭದಲ್ಲಿ ಬ್ರಿಟಿಷರ ಪರವಾಗಿ ಸರ್ಕಾರಿ ನೌಕರಿ ಮಾಡುವಂತೆ ಹಾಗೂ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗಿಯಾಗದಂತೆ ಹೇಳುತ್ತಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.
ಈಗ ನಾವು ಪ್ರಚಾರ ಮಾಡದಂತೆ ತಡೆಯಲಾಗುತ್ತಿದೆ. ಪ್ರಜಾಪ್ರಭುತ್ವದ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಐಟಿ, ಇಡಿ ಸಿಬಿಐ ಬಳಿಕ ವಿರೋಧ ಪಕ್ಷ ಇರಲಿ ತಮ್ಮ ಮೈತ್ರಿ ಪಕ್ಷಗಳನ್ನು ಹೆದರಿಸುತ್ತಿದ್ದಾರೆ. ಬೆದರಿಸಿ ಶಾಸಕರು, ಸಂಸದರನ್ನು ಖರೀದಿಸಿ ಸರ್ಕಾರ ರಚನೆ ಮಾಡಿದ್ದಾರೆ. ಮೋದಿ ತೊಲಗುವವರೆಗೂ ದೇಶದಲ್ಲಿ ಸಮೃದ್ಧಿ ಇರದು ಎಂದು ಆರೋಪಿಸಿದ್ದಾರೆ.
ಸಂವಿಧಾನ ಉಳಿಸಬೇಕು, ಸಂವಿಧಾನ ಉಳಿದರೆ ಮೀಸಲಾತಿ, ಬಡವರಿಗೆ ಹಕ್ಕುಗಳು ಲಭಿಸಲಿದೆ. ನಾವು ದೇಶಕ್ಕೆ ಸ್ವಾತಂತ್ರ್ಯ ಕೊಡಿಸಲು ರಕ್ತ ಹರಿಸಿದ್ದೇವೆ. ಇಂದಿರಾಗಾಂಧಿ, ರಾಜೀವ್ ಗಾಂಧಿ ಜೀವವನ್ನು ತೆತ್ತಿದ್ದಾರೆ. ಈಗ ದೇಶದಲ್ಲಿ ಕೆಲವು ನಾಯಕರ ಅಭಿವೃದ್ಧಿಯನ್ನಲ್ಲ, ಮೋದಿ ಬಯಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.