ಶಿವಾಜಿ ಹುಟ್ಟಿಲ್ಲದಿದ್ದರೆ ದೇಶದಲ್ಲಿ ಹಿಂದೂಗಳೇ ಇರುತ್ತಿರಲ್ಲಿಲ್ಲ : ಈಶ್ವರಪ್ಪ
ಚಿತ್ರದುರ್ಗ : ಶಿವಾಜಿ ಹುಟ್ಟಿಲ್ಲದಿದ್ದರೆ ಈ ದೇಶದಲ್ಲಿ ಹಿಂದೂಗಳು ಯಾರು ಸಹ ಇರುತ್ತಿರಲಿಲ್ಲ. ಹಾಗೆಯೇ ಆರ್ಎಸ್ಎಸ್ ಇಲ್ಲದಿದ್ದರೆ ಯೋಚನೆ ಮಾಡಬೇಕಿತ್ತು. ಎಂದೋ ಈ ದೇಶ ಪಾಕಿಸ್ತಾನವೋ, ಇನ್ನೊಂದೆನೋ ಆಗುತ್ತಿತ್ತು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಕೆಲ ದಿನಗಳಿಂದ ಆರ್ ಎಸ್ ಎಸ್ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ಈ ಬಗ್ಗೆ ಚಿತ್ರದುರ್ಗದಲ್ಲಿ ಮಾತನಾಡಿದ ಈಶ್ವರಪ್ಪ, ನೆಹರು ಹಾಗೂ ಇಂದಿರಾಗಾಂಧಿ ಆರ್ಎಸ್ಎಸ್ ಬಗ್ಗೆ ಮಾತನಾಡಿ ಅನುಭವಿಸಿದ್ದಾರೆ.
ಹೀಗಾಗಿ ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಹೆಚ್ ಡಿ ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್ ಅವರಿಗೆ ಹೇಳಲು ಬಯಸುತ್ತೇನೆ.
ಆರ್ಎಸ್ಎಸ್ ಬಗ್ಗೆ ಮಾತನಾಡೋದು ಬೆಂಕಿ ಜತೆ ಸರಸವಾಡಿದಂತೆ ಎಂದು ವಾರ್ನಿಂಗ್ ನೀಡಿದರು.
ರಾಮನ ಬಗ್ಗೆ ರಾವಣನಿಗೆ ಎಲ್ಲಾ ಗೊತ್ತಿತ್ತು. ಆದರೆ ಶಿವಾಜಿ ಬಗ್ಗೆ ಔರಂಗಜೇಬ್ ಗೆ ಏನೂ ಗೊತ್ತಿರಲಿಲ್ಲ.
ಹೀಗಾಗಿ ಅಂದು ಶಿವಾಜಿ ಹುಟ್ಟಿಲ್ಲದಿದ್ದರೆ ಈ ದೇಶದಲ್ಲಿ ಹಿಂದೂಗಳು ಯಾರು ಸಹ ಇರುತ್ತಿರಲಿಲ್ಲ.
ಹಾಗೆಯೇ ಆರ್ಎಸ್ಎಸ್ ಇಲ್ಲದಿದ್ದರೆ ಯೋಚನೆ ಮಾಡಬೇಕಿತ್ತು. ಎಂದೋ ಈ ದೇಶ ಪಾಕಿಸ್ತಾನವೋ, ಇನ್ನೊಂದೆನೋ ಆಗುತ್ತಿತ್ತು ಎಂದು ಅಭಿಪ್ರಾಯಪಟ್ಟರು.