ಬೆಂಗಳೂರು : ಈ ಬಾರಿಯ ಚುನಾವಣೆಯಲ್ಲಿ ಮತದಾರ ಅತಂತ್ರ ಸ್ಥಿತಿಯನ್ನು ತಂದೊಡ್ಡಬಹುದು ಎಂದೇ ಇಲ್ಲಿಯವರೆಗಿನ ಸಮೀಕ್ಷೆಗಳು ಹೇಳಿವೆ. ಇನ್ನೇನು ಕೆಲವೇ ಗಂಟೆಗಳಲ್ಲಿ ಎಲ್ಲರ ಹಣೆಬರಹ ತಿಳಿಯಲಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಕುಮಾರಸ್ವಾಮಿ(HD Kumaraswamy), ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ ಎಂದು ಹೇಳಿದ್ದಾರೆ.
ನನ್ನದು ಸಣ್ಣ ಪಕ್ಷ. ಎಲ್ಲರೂ ಕಡಿಮೆ ಗೆಲ್ಲುತ್ತಾರೆ ಎಂದೇ ಹೇಳುತ್ತಿದ್ದಾರೆ. ಹೇಗೆ ಅತಂತ್ರ ಆಗುತ್ತದೆ? ನಾನು ನೋಡ್ತಾ ಇದ್ದೇನೆ. ಕಾಂಗ್ರೆಸ್ (Congress), ಬಿಜೆಪಿಯವರು (BJP) ಸೂಟ್ ಹೋಲಿಸಿಕೊಂಡು ಓಡಾಡುತ್ತಾ ಇದ್ದಾರೆ. ನನ್ನದು ಸಣ್ಣ ಪಕ್ಷ, 12-20 ರಲ್ಲಿ ಇಟ್ಟಿದ್ದೀರಾ, ನನ್ನ ಕೇಳಿದರೆ ಏನು ಹೇಳುವುದು ಎಂದು ಹೇಳಿದ್ದಾರೆ.
ನನ್ನನ್ನು ಯಾವ ನಾಯಕರು ಸಂಪರ್ಕ ಮಾಡಿಲ್ಲ. 20 ಸೀಟ್ ಇಟ್ಟುಕೊಂಡು ಟ್ಕೊಂಡು ಕಂಡೀಷನ್ ಹಾಕಲು ಸಾಧ್ಯನಾ? ಎಂದು ಪ್ರಶ್ನಿಸಿದ್ದಾರೆ.








