ಬಳ್ಳಾರಿ: ಸಚಿವ ಸಂಪುಟ ವಿಸ್ತರಣೆಗಾಗಿ ವರಿಷ್ಠರ ಜತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೈಕಮಾಂಡ್ ನಾಯಕರ ಜತೆ ಮಾತುಕತೆ ನಡೆಸಿರುವ ಬೆನ್ನಲ್ಲೇ ಸಂಪುಟಕ್ಕೆ ಸೇರಲು ಬಿಜೆಪಿ ಶಾಸಕರಲ್ಲಿ ಲಾಬಿ ಜೋರಾಗಿದೆ.
ಈ ನಡುವೆ, ಬಳ್ಳಾರಿಯಲ್ಲಿ ಮಾತನಾಡಿರುವ ಬಿಜೆಪಿ ಶಾಸಕ ಸೋಮಶೇಖರರೆಡ್ಡಿ, ನನಗೆ ಸಚಿವ ಸಂಪುಟದಲ್ಲಿ ಅವಕಾಶ ಸಿಕ್ಕೇ ಸಿಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಾನು ಮಂತ್ರಿ ಗಿರಿಗಾಗಿ ಯಾವುದೇ ಕಾರಣಕ್ಕೂ ಲಾಬಿ ಮಾಡುವುದಿಲ್ಲ. ಕಾಸಪುರ ಹನುಮನ ಅನುಗ್ರಹ ಇದ್ದರೆ ಖಂಡಿತವಾಗಿಯೂ ನಾನು ಮಂತ್ರಿಯಾಗುತ್ತೇನೆ. ಸಚಿವ ಸ್ಥಾನ ನನಗೆ ಸಿಕ್ಕೆ ಸಿಗುತ್ತದೆ. ಕೈ ಕಮಾಂಡ್ ಗುರುತಿಸಿ ನನಗೆ ಸಚಿವ ಸ್ಥಾನ ನೀಡಿದರೆ ಸಂತೋಷವಾಗಿ ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ.
ನನ್ನ ಮಗ ರಾಜಕೀಯಕ್ಕೆ ಬರುವುದು ನನಗೆ ಇಷ್ಟವಿಲ್ಲ. ಆದರೆ ಅವನು ರಾಜಕೀಯಕ್ಕೆ ಬರುವ ಇಂಗಿತವನ್ನ ವ್ಯಕ್ತಪಡಿಸಿದ್ದಾನೆ. ಮುಂದಿನ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅವನನ್ನು ಕಣಕ್ಕಿಳಿಸುವ ಬಗ್ಗೆ ಇನ್ನು ಯೋಚಿಸಿಲ್ಲ. ಬಳ್ಳಾರಿ ನಗರಕ್ಕೆ ಸ್ಮಾರ್ಟ್ ಸಿಟಿ ಗರಿ ಸಿಕ್ಕೇ ಸಿಗುತ್ತದೆ ಎಂದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel