RSS ಇಲ್ಲಾ ಅಂದಿದ್ರೆ ಈ ದೇಶ ಪಾಕಿಸ್ತಾನ ಆಗಿರ್ತಿತ್ತು : ಈಶ್ವರಪ್ಪ
ಬಾಗಲಕೋಟೆ : ಆರ್ ಎಸ್ ಎಸ್ ದೇಶದ ಯುವಕರಿಗೆ ರಾಷ್ಟ್ರಭಕ್ತಿ ನಿರ್ಮಾಣ ಮಾಡುವ ದೊಡ್ಡ ಶಕ್ತಿ. ಆರ್ ಎಸ್ ಎಸ್ ಇಲ್ಲಾ ಅಂದಿದ್ರೆ ಈ ದೇಶ ಪಾಕಿಸ್ತಾನ ಆಗಿ ಹೋಗಿರ್ತಿತ್ತು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಆರ್ ಎಸ್ ಎಸ್ ವಿಚಾರವಾಗಿ ಕಾಂಗ್ರೆಸ್, ಜೆಡಿಎಸ್ ನಾಯಕರು ಟೀಕೆ ಮಾಡುತ್ತಿರುವ ಬಗ್ಗೆ ಬಾಗಲಕೋಟೆಯಲ್ಲಿ ಪ್ರತಿಕ್ರಿಯೆ ನೀಡಿದ ಕೆ.ಎಸ್.ಈಶ್ವರಪ್ಪ, ಕಾಂಗ್ರೆಸ್, ಜೆಡಿಎಸ್ ನವರು ಮುಸ್ಲಿಂ, ಕ್ರಿಶ್ಚಿಯನ್ ವೋಟುಗಳ ಮೇಲೆ ಕಣ್ಣಿಟ್ಟು ಆರ್ಎಸ್ಎಸ್ ಗೆ ಬೈದ್ರೆ ತಮಗೆ ವೋಟು ಕೊಡುತ್ತಾರೆ ಅನ್ನೋ ಭ್ರಮೆಯಲ್ಲಿದ್ದಾರೆ.
ರಾಷ್ಟ್ರಭಕ್ತ ಮುಸ್ಲಿಮರು ಬಿಜೆಪಿಯಲ್ಲೆ ಇದ್ದಾರೆ. ಉಳಿದ ಮುಸ್ಲಿಮರು ನಮ್ಮ ಜೊತೆ ಬರುತ್ತಾರೆ. ಮೊದಲು ಮುಸ್ಲಿಂ, ಕ್ರಿಶ್ಚಿಯನ್ ರಾಷ್ಟ್ರಗಳು ಪಾಕಿಸ್ತಾನ ಜೊತೆ ಇದ್ದವು.
ಈಗ ಮೋದಿ ಪ್ರಧಾನಿಯಾದ ಬಳಿಕ ಇಡೀ ವಿಶ್ವವೇ ಮೋದಿ ಜೊತೆ ಇದೆ. ಇಂದು ಪಾಕಿಸ್ತಾನ ಒಬ್ಬಂಟಿಯಾಗಿದೆ. ಇವರಿಗೇನು ಕಲ್ಪನೆ ಇಲ್ಲ ಎಂದು ವಾಗ್ದಾಳಿ ನಡೆಸಿದರು
ಇದೇ ವೇಳೆ ಸಿದ್ದರಾಮಯ್ಯ, ಹೆಚ್ ಡಿ ಕುಮಾರಸ್ವಾಮಿ ಡಿ.ಕೆ.ಶಿವಕುಮಾರ್ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ ಈಶ್ವರಪ್ಪ, ಆರ್ ಎಸ್ ಎಸ್ ಬಗ್ಗೆ ಮಾತಾಡಿದಾಗ ನೆಹರು, ಇಂದಿರಾಗಾಂಧಿ ಅವರನ್ನೇ ಬಿಟ್ಟಿಲ್ಲ. ಇನ್ನು ಇವರ್ಯಾರ್ರಿ ನಮ್ಮ ಲೆಕ್ಕಕ್ಕೆ ಎಂದು ಗುಡುಗಿದರು.