ದೇವನಹಳ್ಳಿ: ವ್ಯಕ್ತಿಯೊಬ್ಬ ಅತ್ತಿಗೆ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು, ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಅಣ್ಣನನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆಯ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ದೊಡ್ಡಮಂಕಳಾಲದಲ್ಲಿ ನಡೆದಿದೆ. ಸಣ್ಣ ಗುಡಿಸಲಿನಲ್ಲಿ ಗಂಗರಾಜು ಜೀವನ ಸಾಗಿಸುತ್ತಿದ್ದರು. ಭಾಗ್ಯಮ್ಮ ಆತನ ಹೆಂಡತಿ. ಆದರೆ, ಭಾಗ್ಯಮ್ಮ ಮೈದುನ ರವಿಯೊಂದಿಗೆ ಕಳೆದೆರಡು ವರ್ಷಗಳಿಂದ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು. ಹೀಗಾಗಿ ಆತನೊಂದಿಗೆ ಮನೆ ಬಿಟ್ಟು ಹೋಗಿದ್ದಳು.
ಆದರೂ ಪತ್ನಿ ಹೋದರೂ ಸ್ವಾಭಿಮಾನದಿಂದ ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಆದರೆ, ಕಳೆದ ಕೆಲವು ದಿನಗಳಿಂದ ಪತ್ನಿ ಭಾಗ್ಯಮ್ಮ ಗಂಡ ಗಂಗರಾಜು ಮನೆಗೆ ಮರಳಿ ಬಂದಿದ್ದಳು. ಆದರೆ, ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಎಂದು ಪಾಪಿ ಸಹೋದರ ಅಣ್ಣನನ್ನೇ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ, ಆರೋಪಿಗಾಗಿ ಬಲೆ ಬೀಸಿದ್ದಾರೆ.