ನಾನು ಓಪನ್ ಹಾರ್ಟೆಡ್ : ಜಮೀರ್ ಅಹ್ಮದ್
ಬೆಂಗಳೂರು : ನಾನು ಓಪನ್ ಹಾರ್ಟೆಟ್ ಏನೇ ಹೇಳಿದರೂ ಓಪನ್ ಆಗಿ ಹೇಳುತ್ತೇನೆ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಮುಂದಿನ ಸಿಎಂ ಅಭ್ಯರ್ಥಿ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹ್ಮದ್, ಮುಂದಿನ ಮುಖ್ಯಮಂತ್ರಿ ಬಗ್ಗೆ ಚರ್ಚೆ ಮಾಡಬೇಡಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಹಾಗಾಗಿ ನಾನು ಈಗ ಏನು ಹೇಳಲ್ಲ. ನಾನು ಓಪನ್ ಹಾರ್ಟೆಡ್ ಏನೇ ಹೇಳಿದರೂ ಓಪನ್ ಆಗಿ ಹೇಳುತ್ತೇನೆ.
ನಮ್ಮ ನಾಯಕರಾದ ಸಿದ್ದರಾಮಯ್ಯ ಮುಖ್ಯಮಂತ್ರಿ ಚರ್ಚೆಗೆ ಫುಲ್ ಸ್ಟಾಪ್ ಹಾಕಿ ಎಂದಿದ್ದಾರೆ. ಹಾಗಾಗಿ ಹೇಳಿಕೆಗೆ ಟೋಟಲಿ ಫುಲ್ ಸ್ಟಾಪ್ ಹಾಕಿದ್ದೀನಿ ಎಂದು ಹೇಳಿದರು.
ಇನ್ನು ನಮ್ಮ ಪಕ್ಷದಲ್ಲಿ ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ. ನಾನು ನನ್ನ ಅಭಿಪ್ರಾಯ ಹೇಳಿದ್ದೀನಿ. ಸಿದ್ದರಾಮಯ್ಯ ಅವರ ಸರ್ಕಾರದ ಕೆಲಸವನ್ನು ಜನ ನೆನಪಿಸಿಕೊಳ್ತಾರೆ.
ಕಾಂಗ್ರೆಸ್ ಸರ್ಕಾರ ಬೇಕು ಅಂತಾರೆ. ನಮ್ಮಲ್ಲಿ ಸಾಕಷ್ಟು ಜನ ಮುಖ್ಯಮಂತ್ರಿ ಪಟ್ಟಕ್ಕೆ ಅರ್ಹರಿದ್ದಾರೆ. ಯಾರು ಸಿಎಂ ಆಗಬೇಕು ಅನ್ನೋದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತೆ.
ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಜನರ ಅಭಿಪ್ರಾಯ ಯಾರ ಪರವಾಗಿ ಇದೆ ಅವರು ಆಗುತ್ತಾರೆ. ಲಿಂಗಾಯತರಲ್ಲಿ ನಮಗೆ ಕೊಡಿ ಎಂದು ಎಂ.ಬಿ ಪಾಟೀಲ್ ಹೇಳ್ತಾರೆ.
ಅಲ್ಪಸಂಖ್ಯಾತರಲ್ಲಿ ಸಿ.ಎಂ ಇಬ್ರಾಹಿಂ ಕೊಡಿ ಅಂತಾರೆ. ತನ್ವೀರ್ ಸೇಠ್ ನಾನು ಮುಖ್ಯಮಂತ್ರಿ ಆಕಾಂಕ್ಷಿ ಎಂದಿದ್ದಾರೆ. ಯಾರು ಸಿಎಂ ಆಗಬೇಕು ಎಂಬುದನ್ನು ನಮ್ಮ ಹೈಕಮಾಂಡ್ ನಿರ್ಧರಿಸಲಿದೆ ಎಂದರು.