7ನೇ ವೇತನ ಆಯೋಗದ ಶಿಫಾರಸು ಜಾರಿ – ರಾಜ್ಯ ನೌಕರರಿಗೆ ಸಿಹಿ ಸುದ್ದಿ…
ಏಳನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.
ಸರ್ಕಾರಿ ನೌಕರರು ಮಾರ್ಚ್ 1ರಿಂದ ಮುಷ್ಕರಕ್ಕೆ ಮುಂದಾಗಿದ್ರು. ಈ ಬೆಳವಣಿಗೆ ಚುನಾವಣೆ ಮೇಲೆ ಪರಿಣಾಮ ಬೀರುವ ಆತಂಕವನ್ನ ಕಾಡುತ್ತಿತ್ತು. ಬಿಜೆಪಿಯ ಬಹುತೇಕ ನಾಯಕರು ಸರ್ಕಾರಿ ನೌಕರರ ಪರ ಬ್ಯಾಟ್ ಬೀಸಿದ್ದರು. ಹೀಗಾಗಿ ಅಧಿವೇಶನ ಮುಗಿಯಲು ಒಂದು ದಿನ ಇರುವಾಗಲೇ ವಿಧಾನಸಭೆ ಸಾಕ್ಷಿಯಾಗಿ ಸಿಎಂ ಬೊಮ್ಮಾಯಿ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಮಾರ್ಚ್ ತಿಂಗಳಲ್ಲಿ 7ನೇ ವೇತನ ಆಯೋಗದ ಮಧ್ಯಂತರ ವರದಿ ಅನ್ವಯ ನಿರ್ಧಾರ ತೆಗೆದುಕೊಳ್ಳುವ ಘೋಷಣೆಯನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಆದರೆ ಯಾವ ಪ್ರಮಾಣದಲ್ಲಿ ವೇತನ ಹೆಚ್ಚಳ ಆಗಲಿದೆ ಎಂಬ ಗುಟ್ಟನ್ನು ಸಿಎಂ ಬೊಮ್ಮಾಯಿ ಬಿಟ್ಟುಕೊಟ್ಟಿಲ್ಲ.
Implementation of 7th Pay Commission recommendation – good news for state employees…