ಬೆಂಗಳೂರು: ಮಾಲ್ ನಲ್ಲಿ (Mall) ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ಕೋರ್ಟ್ ಗೆ ಶರಣಾಗಿದ್ದಾರೆ.
ಅಶ್ವಥ್ ನಾರಾಯಣ್ (60) ಕೋರ್ಟ್ ಮುಂದೆ ಶರಣಾದ ವ್ಯಕ್ತಿ ಎನ್ನಲಾಗಿದೆ. ಈ ವ್ಯಕ್ತಿಯು ಬೆಂಗಳೂರಿನ (Bengaluru) ಮಾಲ್ ವೊಂದರಲ್ಲಿ ಮಹಿಳೆಯರ ಜೊತೆ ಕೆಟ್ಟದಾಗಿ ವರ್ತಿಸಿದ್ದ ಎಂಬ ಆರೋಪ ಕೇಳಿ ಬಂದಿದೆ. ಇದನ್ನು ವ್ಯಕ್ತಿಯೊಬ್ಬರು ವಿಡಿಯೋ ಮಾಡಿದ್ದರು. ಈ ವಿಡಿಯೋಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯ ಗುರುತು ಪತ್ತೆ ಹಚ್ಚಿದ್ದರು. ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎಫ್ ಐಆರ್ ದಾಖಲಾಗಿತ್ತು.
ಆ ನಂತರ ಆರೋಪಿಯು ತಲೆ ಮರೆಸಿಕೊಂಡಿದ್ದ. ಹೀಗಾಗಿ ಆತನಿಗಾಗಿ ಶೋಧ ಕಾರ್ಯ ನಡೆದಿತ್ತು. ಆದರೆ, ಕೋರ್ಟ್ ಎದುರು ಆರೋಪಿ ಶರಣಾಗಿದ್ದು, ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ.








