ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಸಭೆ ನಡೆಸಿದರು.
ಕೊರೊನಾ ಸಾವಿನ ಬಗ್ಗೆ ತನಿಖೆ ನಡೆಸಲು 13 ಮಂದಿ ವೈದ್ಯಾಧಿಕಾರಿಗಳ ತಂಡ ಕಾರ್ಯರಂಭ ಮಾಡಲಿದೆ. ಜಿಲ್ಲೆಯಲ್ಲಿ 36 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಇವರಲ್ಲಿ 26 ಜನರು ಇತರ ಖಾಯಿಲೆಗಳಿಂದ ಬಳಲಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದರು.
ಮೃತರಲ್ಲಿ ಮೂವರು ಮೂವರು ಮಂದಿ ಭಟ್ಕಳ, ಒಬ್ಬರು ಚಿತ್ರದುರ್ಗ ಮತ್ತೊಬ್ಬರು ಮಡಿಕೇರಿ ಮೂಲದವರಾಗಿದ್ದಾರೆ. 50 ವರ್ಷಕ್ಕಿಂತ ಕಡಿಮೆ ವಯಸ್ಸಿನ 9 ಮಂದಿ ಸಾವನ್ನಪ್ಪಿದ್ದರೆ, 50 -60 ವರ್ಷದೊಳಗಿನ 10 ಮಂದಿ ಸಾವನ್ನಪ್ಪಿದ್ದಾರೆ. 60-70 ವರ್ಷದೊಳಗೆ 11 ಮಂದಿ ಸಾವನ್ನಪ್ಪಿದ್ದರೆ, 70 ವರ್ಷಕ್ಕಿಂತ ಮೇಲಿನವರು ಒಬ್ಬರು ಸಾವನ್ನಪ್ಪಿದ್ದಾರೆ ಎಂದು ದ.ಕ ಜಿಲ್ಲಾಧಿಕಾರಿ ಸಭೆಯಲ್ಲಿ ಮಾಹಿತಿ ನೀಡಿದ್ದಾರೆ.
ಜೀವನದಲ್ಲಿ ಮನಸ್ಸಿಗೆ ಶಾಂತಿ ಇಲ್ಲ ಎಂದು ಹೇಳುವವರು ಈ ಕಥೆಯನ್ನು ಓದಿ, ಶಾಂತಿ ಎಲ್ಲಿ ಸಿಗುತ್ತದೆ ಎಂದು ನಿಮಗೆ ತಿಳಿಯುತ್ತದೆ.
ಮನಸ್ಸಿನ ಶಾಂತಿಗೆ ದಾರಿ ಜೀವನದಲ್ಲಿ ಮನಸ್ಸಿನ ಶಾಂತಿಯನ್ನು ಹುಡುಕುತ್ತಾ ಅಲೆದಾಡುವ ಅನೇಕ ಜನರು ನಮ್ಮ ನಡುವೆ ಇದ್ದಾರೆ. ಮನಸ್ಸಿನ ಶಾಂತಿ ಎಲ್ಲಿದೆ? ಒಬ್ಬ ಋಷಿ ತನ್ನ ಶಿಷ್ಯನಿಗೆ...








