ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಸಭೆ ನಡೆಸಿದರು.
ಕೊರೊನಾ ಸಾವಿನ ಬಗ್ಗೆ ತನಿಖೆ ನಡೆಸಲು 13 ಮಂದಿ ವೈದ್ಯಾಧಿಕಾರಿಗಳ ತಂಡ ಕಾರ್ಯರಂಭ ಮಾಡಲಿದೆ. ಜಿಲ್ಲೆಯಲ್ಲಿ 36 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಇವರಲ್ಲಿ 26 ಜನರು ಇತರ ಖಾಯಿಲೆಗಳಿಂದ ಬಳಲಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದರು.
ಮೃತರಲ್ಲಿ ಮೂವರು ಮೂವರು ಮಂದಿ ಭಟ್ಕಳ, ಒಬ್ಬರು ಚಿತ್ರದುರ್ಗ ಮತ್ತೊಬ್ಬರು ಮಡಿಕೇರಿ ಮೂಲದವರಾಗಿದ್ದಾರೆ. 50 ವರ್ಷಕ್ಕಿಂತ ಕಡಿಮೆ ವಯಸ್ಸಿನ 9 ಮಂದಿ ಸಾವನ್ನಪ್ಪಿದ್ದರೆ, 50 -60 ವರ್ಷದೊಳಗಿನ 10 ಮಂದಿ ಸಾವನ್ನಪ್ಪಿದ್ದಾರೆ. 60-70 ವರ್ಷದೊಳಗೆ 11 ಮಂದಿ ಸಾವನ್ನಪ್ಪಿದ್ದರೆ, 70 ವರ್ಷಕ್ಕಿಂತ ಮೇಲಿನವರು ಒಬ್ಬರು ಸಾವನ್ನಪ್ಪಿದ್ದಾರೆ ಎಂದು ದ.ಕ ಜಿಲ್ಲಾಧಿಕಾರಿ ಸಭೆಯಲ್ಲಿ ಮಾಹಿತಿ ನೀಡಿದ್ದಾರೆ.
ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ
ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...








